Homeಮುಖಪುಟಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು. ದೆಹಲಿಯ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಣ ನೀಡುತ್ತಿವೆ. ದೆಹಲಿಯ ಮೊಹಲ್ಲಾ ಕ್ಲಿನಕ್ ಗಳು ಬಡಜನರ ಆರೋಗ್ಯ ಸುಧಾರಿಸಿವೆ. ಜೊತೆಗೆ ಹೈ ಕ್ಲಾಸ್ ಸರ್ಕಾರಿ ಹಾಸ್ಪಿಟಲ್ ಗಳು ತಲೆಎತ್ತಿವೆ. ಇದರ ಹಿಂದಿನ ರೂವಾರಿ ಅಲ್ಲಿನ ಆಪ್ ಸರ್ಕಾರ.

ದೆಹಲಿಯ ಸರ್ಕಾರಿ ಶಾಲೆ

ಆಂದ್ರದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಪಾಠ ಮಾಡುತ್ತಿದ್ದ ಅತಿಶಿ ಶಾಲೆಯ ಕೆಲಸ ಬಿಟ್ಟು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಸಾವಯವ ಕೃಷಿಯಲ್ಲಿ ತೊಡಗಿದ್ದರು. 2011ರಲ್ಲಿ ಭ್ರಷ್ಟಾಚಾರ ವಿರೋಧಿ ಚಳುವಳಿಯಿಂದ ಆಕರ್ಷಿತರಾಗಿ ಅರವಿಂದ ಕೇಜ್ರಿವಾಲ್ ತಂಡವನ್ನು ಸೇರಿದರು. ದೆಹಲಿಯಲ್ಲಿ AAP ಸರ್ಕಾರ ಬಂದಾಗ ಅದರ ನೀತಿ ನಿರೂಪಣಾ ತಂಡದಲ್ಲಿ ಅತಿಶಿ ಇದ್ದರು.

ದೆಹಲಿಯ ಸರ್ಕಾರಿ ಹಾಸ್ಪಿಟಲ್

ಅಧಿಕಾರದ ವಿಕೇಂದ್ರಿಕರಣಕ್ಕಾಗಿ ಅವರು ರೂಪಿಸಿದ ಮೊಹಲ್ಲಾಸಭಾ ಪರಿಕಲ್ಪನೆಯನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದರೂ ಅತಿಶಿ ಗಮನಸೆಳೆದರು. ಶಿಕ್ಷಣ ಸಚಿವ ಸಿಸೋಡಿಯಾರ ಶೈಕ್ಷಣಿಕ ಸಲಹೆಗಾರಳಾಗಿ ಅತಿಶಿ ಅದ್ಭುತವನ್ನೇ ಸಾಧಿಸಿದರು. ದೆಹಲಿಯ ಸರ್ಕಾರಿ ಶಾಲೆಗಳಿಂದು ಗುಣಮಟ್ಟದ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಂಸ್ಥೆಗಳಾಗಿ ರೂಪುಗೊಂಡಿದ್ದರೆ ಅದರ ಶ್ರೇಯ ಅತಿಶಿಯವರಿಗೆ ಸಲ್ಲಬೇಕು ಎನ್ನುತ್ತಾರೆ ಮನಿಷ್ ಸಿಸೋಡಿಯಾ.

ಸರ್ಕಾರಿ ಶಾಲೆಯ ಸಭಾಂಗಣ

ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರು ತಮ್ಮ ಫೇಸ್ ಬುಕ್ ನಲ್ಲಿ ಅಲ್ಲಿನ ಅತ್ಯುತ್ತಮ ಸರ್ಕಾರಿ ಶಾಲೆಗಳ, ಲೈಬ್ರರಿಗಳ, ಸಭಾಂಗಣ, ಊಟದ ಆವರಣ, ಸೆಮಿನಾರ್ ಹಾಲ್ ಮುಂತಾದವುಗಳ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಸೋಲಿನ ನಂತರದ ಸಭೆಯಲ್ಲಿ ಅತಿಶಿ

ಜೊತೆಗೆ ಹೈ ಕ್ಲಾಸ್ ಹಾಸ್ಪಿಟಲ್ ಗಳ ಚಿತ್ರ, ಇನ್ನು ನಿರ್ಮಾಣ ಹಂತದಲ್ಲಿರುವ ಹಾಸ್ಪಿಟಲ್ ಗಳ ಚಿತ್ರಗಳನ್ನು ಹರಿಬಿಟ್ಟಿದ್ದಾರೆ. ಇದನ್ನು ನೋಡಿದರೆ ನಿಜಕ್ಕೂ ಅವರ ಮೇಲೆ ಅಭಿಮಾನ ಮೂಡುತ್ತದೆ. ಆ ಚಿತ್ರಗಳನ್ನು ನೀವೂ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...