Homeಮುಖಪುಟಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು. ದೆಹಲಿಯ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಣ ನೀಡುತ್ತಿವೆ. ದೆಹಲಿಯ ಮೊಹಲ್ಲಾ ಕ್ಲಿನಕ್ ಗಳು ಬಡಜನರ ಆರೋಗ್ಯ ಸುಧಾರಿಸಿವೆ. ಜೊತೆಗೆ ಹೈ ಕ್ಲಾಸ್ ಸರ್ಕಾರಿ ಹಾಸ್ಪಿಟಲ್ ಗಳು ತಲೆಎತ್ತಿವೆ. ಇದರ ಹಿಂದಿನ ರೂವಾರಿ ಅಲ್ಲಿನ ಆಪ್ ಸರ್ಕಾರ.

ದೆಹಲಿಯ ಸರ್ಕಾರಿ ಶಾಲೆ

ಆಂದ್ರದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಪಾಠ ಮಾಡುತ್ತಿದ್ದ ಅತಿಶಿ ಶಾಲೆಯ ಕೆಲಸ ಬಿಟ್ಟು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಸಾವಯವ ಕೃಷಿಯಲ್ಲಿ ತೊಡಗಿದ್ದರು. 2011ರಲ್ಲಿ ಭ್ರಷ್ಟಾಚಾರ ವಿರೋಧಿ ಚಳುವಳಿಯಿಂದ ಆಕರ್ಷಿತರಾಗಿ ಅರವಿಂದ ಕೇಜ್ರಿವಾಲ್ ತಂಡವನ್ನು ಸೇರಿದರು. ದೆಹಲಿಯಲ್ಲಿ AAP ಸರ್ಕಾರ ಬಂದಾಗ ಅದರ ನೀತಿ ನಿರೂಪಣಾ ತಂಡದಲ್ಲಿ ಅತಿಶಿ ಇದ್ದರು.

ದೆಹಲಿಯ ಸರ್ಕಾರಿ ಹಾಸ್ಪಿಟಲ್

ಅಧಿಕಾರದ ವಿಕೇಂದ್ರಿಕರಣಕ್ಕಾಗಿ ಅವರು ರೂಪಿಸಿದ ಮೊಹಲ್ಲಾಸಭಾ ಪರಿಕಲ್ಪನೆಯನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದರೂ ಅತಿಶಿ ಗಮನಸೆಳೆದರು. ಶಿಕ್ಷಣ ಸಚಿವ ಸಿಸೋಡಿಯಾರ ಶೈಕ್ಷಣಿಕ ಸಲಹೆಗಾರಳಾಗಿ ಅತಿಶಿ ಅದ್ಭುತವನ್ನೇ ಸಾಧಿಸಿದರು. ದೆಹಲಿಯ ಸರ್ಕಾರಿ ಶಾಲೆಗಳಿಂದು ಗುಣಮಟ್ಟದ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಂಸ್ಥೆಗಳಾಗಿ ರೂಪುಗೊಂಡಿದ್ದರೆ ಅದರ ಶ್ರೇಯ ಅತಿಶಿಯವರಿಗೆ ಸಲ್ಲಬೇಕು ಎನ್ನುತ್ತಾರೆ ಮನಿಷ್ ಸಿಸೋಡಿಯಾ.

ಸರ್ಕಾರಿ ಶಾಲೆಯ ಸಭಾಂಗಣ

ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರು ತಮ್ಮ ಫೇಸ್ ಬುಕ್ ನಲ್ಲಿ ಅಲ್ಲಿನ ಅತ್ಯುತ್ತಮ ಸರ್ಕಾರಿ ಶಾಲೆಗಳ, ಲೈಬ್ರರಿಗಳ, ಸಭಾಂಗಣ, ಊಟದ ಆವರಣ, ಸೆಮಿನಾರ್ ಹಾಲ್ ಮುಂತಾದವುಗಳ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಸೋಲಿನ ನಂತರದ ಸಭೆಯಲ್ಲಿ ಅತಿಶಿ

ಜೊತೆಗೆ ಹೈ ಕ್ಲಾಸ್ ಹಾಸ್ಪಿಟಲ್ ಗಳ ಚಿತ್ರ, ಇನ್ನು ನಿರ್ಮಾಣ ಹಂತದಲ್ಲಿರುವ ಹಾಸ್ಪಿಟಲ್ ಗಳ ಚಿತ್ರಗಳನ್ನು ಹರಿಬಿಟ್ಟಿದ್ದಾರೆ. ಇದನ್ನು ನೋಡಿದರೆ ನಿಜಕ್ಕೂ ಅವರ ಮೇಲೆ ಅಭಿಮಾನ ಮೂಡುತ್ತದೆ. ಆ ಚಿತ್ರಗಳನ್ನು ನೀವೂ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...