Homeಮುಖಪುಟಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ಇವು ದೆಹಲಿ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳು ಎಂದರೆ ನೀವು ನಂಬುವುದಿಲ್ಲ

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳನ್ನು ಇಡೀ ಪ್ರಪಂಚ ಮಟ್ಟದಲ್ಲಿ ಹೆಸರಾಗುವಂತೆ ಮಾಡಿದ ಅತಿಶಿ ಮರ್ಲೀನಾ ತಿಂಗಳಿಗೆ ಪಡೆಯುವ ಸಂಬಳ ಕೇವಲ 1 ರೂ ಅಂದರೆ ನೀವು ನಂಬಲೇಬೇಕು. ದೆಹಲಿಯ ಸರ್ಕಾರಿ ಶಾಲೆಗಳ ಅತ್ಯುತ್ತಮ ಶಿಕ್ಷಣ ನೀಡುತ್ತಿವೆ. ದೆಹಲಿಯ ಮೊಹಲ್ಲಾ ಕ್ಲಿನಕ್ ಗಳು ಬಡಜನರ ಆರೋಗ್ಯ ಸುಧಾರಿಸಿವೆ. ಜೊತೆಗೆ ಹೈ ಕ್ಲಾಸ್ ಸರ್ಕಾರಿ ಹಾಸ್ಪಿಟಲ್ ಗಳು ತಲೆಎತ್ತಿವೆ. ಇದರ ಹಿಂದಿನ ರೂವಾರಿ ಅಲ್ಲಿನ ಆಪ್ ಸರ್ಕಾರ.

ದೆಹಲಿಯ ಸರ್ಕಾರಿ ಶಾಲೆ

ಆಂದ್ರದ ರಿಷಿ ವ್ಯಾಲಿ ಶಾಲೆಯಲ್ಲಿ ಇತಿಹಾಸ ಪಾಠ ಮಾಡುತ್ತಿದ್ದ ಅತಿಶಿ ಶಾಲೆಯ ಕೆಲಸ ಬಿಟ್ಟು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಸಾವಯವ ಕೃಷಿಯಲ್ಲಿ ತೊಡಗಿದ್ದರು. 2011ರಲ್ಲಿ ಭ್ರಷ್ಟಾಚಾರ ವಿರೋಧಿ ಚಳುವಳಿಯಿಂದ ಆಕರ್ಷಿತರಾಗಿ ಅರವಿಂದ ಕೇಜ್ರಿವಾಲ್ ತಂಡವನ್ನು ಸೇರಿದರು. ದೆಹಲಿಯಲ್ಲಿ AAP ಸರ್ಕಾರ ಬಂದಾಗ ಅದರ ನೀತಿ ನಿರೂಪಣಾ ತಂಡದಲ್ಲಿ ಅತಿಶಿ ಇದ್ದರು.

ದೆಹಲಿಯ ಸರ್ಕಾರಿ ಹಾಸ್ಪಿಟಲ್

ಅಧಿಕಾರದ ವಿಕೇಂದ್ರಿಕರಣಕ್ಕಾಗಿ ಅವರು ರೂಪಿಸಿದ ಮೊಹಲ್ಲಾಸಭಾ ಪರಿಕಲ್ಪನೆಯನ್ನು ಲೆಫ್ಟಿನೆಂಟ್ ಗವರ್ನರ್ ತಿರಸ್ಕರಿಸಿದರೂ ಅತಿಶಿ ಗಮನಸೆಳೆದರು. ಶಿಕ್ಷಣ ಸಚಿವ ಸಿಸೋಡಿಯಾರ ಶೈಕ್ಷಣಿಕ ಸಲಹೆಗಾರಳಾಗಿ ಅತಿಶಿ ಅದ್ಭುತವನ್ನೇ ಸಾಧಿಸಿದರು. ದೆಹಲಿಯ ಸರ್ಕಾರಿ ಶಾಲೆಗಳಿಂದು ಗುಣಮಟ್ಟದ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಂಸ್ಥೆಗಳಾಗಿ ರೂಪುಗೊಂಡಿದ್ದರೆ ಅದರ ಶ್ರೇಯ ಅತಿಶಿಯವರಿಗೆ ಸಲ್ಲಬೇಕು ಎನ್ನುತ್ತಾರೆ ಮನಿಷ್ ಸಿಸೋಡಿಯಾ.

ಸರ್ಕಾರಿ ಶಾಲೆಯ ಸಭಾಂಗಣ

ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರು ತಮ್ಮ ಫೇಸ್ ಬುಕ್ ನಲ್ಲಿ ಅಲ್ಲಿನ ಅತ್ಯುತ್ತಮ ಸರ್ಕಾರಿ ಶಾಲೆಗಳ, ಲೈಬ್ರರಿಗಳ, ಸಭಾಂಗಣ, ಊಟದ ಆವರಣ, ಸೆಮಿನಾರ್ ಹಾಲ್ ಮುಂತಾದವುಗಳ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದಾರೆ.

ಸೋಲಿನ ನಂತರದ ಸಭೆಯಲ್ಲಿ ಅತಿಶಿ

ಜೊತೆಗೆ ಹೈ ಕ್ಲಾಸ್ ಹಾಸ್ಪಿಟಲ್ ಗಳ ಚಿತ್ರ, ಇನ್ನು ನಿರ್ಮಾಣ ಹಂತದಲ್ಲಿರುವ ಹಾಸ್ಪಿಟಲ್ ಗಳ ಚಿತ್ರಗಳನ್ನು ಹರಿಬಿಟ್ಟಿದ್ದಾರೆ. ಇದನ್ನು ನೋಡಿದರೆ ನಿಜಕ್ಕೂ ಅವರ ಮೇಲೆ ಅಭಿಮಾನ ಮೂಡುತ್ತದೆ. ಆ ಚಿತ್ರಗಳನ್ನು ನೀವೂ ನೋಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....