ಕಳೆದೊಂದು ವಾರದಿಂದ ಅಪ್ಪಳಿಸುತ್ತಿರುವ ಭಾರಿ ಪ್ರವಾಹಕ್ಕೆ ಹೈದರಾಬಾದ್ ತತ್ತರಿಸಿದೆ. ನೂರಾರು ಮನೆಗಳು, ವಾಹನಗಳು ಕೊಚ್ಚಿಹೋಗಿವೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ದೆಹಲಿ ಸರ್ಕಾರವು ಸಹಾಯ ಹಸ್ತ ಚಾಚಿದ್ದು, 15 ಕೋಟಿ ದೇಣಿಗೆ ನೀಡಲು ಮುಂದಾಗಿದೆ.
ಈ ಕುರಿತು ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ “ಹೈದರಾಬಾದ್ನಲ್ಲಿ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್ನ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲಲಿದ್ದಾರೆ. ಪರಿಹಾರ ಕಾರ್ಯಗಳಿಗಾಗಿ ದೆಹಲಿ ಸರ್ಕಾರವು ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ ದೇಣಿಗೆ ನೀಡಲಿದೆ” ಎಂದು ಘೋಷಿಸಿದ್ದಾರೆ.
Floods have caused havoc in Hyderabad. People of Delhi stand by our brother and sisters in Hyderabad in this hour of crisis.
Delhi govt will donate Rs 15 cr to the Govt of Telangana for its relief efforts.
— Arvind Kejriwal (@ArvindKejriwal) October 20, 2020
ಕೇಜ್ರಿವಾಲ್ರವರ ಈ ನಡೆಗೆ ಟ್ವಿಟ್ಟರ್ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್ ಸಾಂಕ್ರಾಮಿಕದಿಂದ ದೆಹಲಿಯೇ ಸಂಕಷ್ಟದಲ್ಲಿರುವಾಗ ಇನ್ನೊಂದು ರಾಜ್ಯಕ್ಕೆ ಹಣ ನೀಡಬೇಕೇ ಎಂದು ಕೆಲವರು ಪ್ರಶ್ನಿಸಿದರೆ, ಸಂಕಷ್ಟದ ಸಮಯದಲ್ಲಿ ಇತರರ ನೆರವಿಗೆ ಧಾವಿಸಿರುವುದಕ್ಕೆ ಹಲವರು ಪ್ರಶಂಸಿದ್ದಾರೆ.
ಇದನ್ನೂ ಓದಿ: ಅ.21 ರವರೆಗೂ ಮಹಾಮಳೆ: ಹೈದರಾಬಾದ್ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಹ ಪೀಡಿತ ರಾಜ್ಯಗಳಿಗೆ ಒಂದು ಪೈಸೆಯೂ ಹಣ ಬಿಡುಗಡೆ ಮಾಡಿಲ್ಲ. ಕೋವಿಡ್ ನಿರ್ವಹಣೆಗೂ ಹಣ ನೀಡುತ್ತಿಲ್ಲ ಎಂದು ಹಲವರು ದೂರಿದ್ದಾರೆ.
భారీ వర్షాల వల్ల ఉత్పన్నమయిన పరిస్థితిని ఉద్దేశించి నేను @TelanganaCMO KCR గారితో, @AndhraPradeshCM @ysjagan గారితో మాట్లాడాను.
వారికి కేంద్ర ప్రభుత్వం అన్ని విధాలా సహాయం అందిస్తుందని హామీ ఇవ్వబడింది.
వర్ష బాధితుల క్షేమం కొరకై ప్రార్ధిస్తున్నాను.— Narendra Modi (@narendramodi) October 14, 2020
ಪ್ರಧಾನಿ ಮೋದಿಯವರು ಅಕ್ಟೋಬರ್ 14 ರಂದು ಟ್ವೀಟ್ ಮಾಡಿ “ಪ್ರವಾಹದಿಂದ ತತ್ತರಿಸಿರುವ ತೆಲಂಗಾಣ ರಾಜ್ಯಕ್ಕೆ ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ಭರವಸೆ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?