Homeಮುಖಪುಟಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

- Advertisement -
- Advertisement -

ಕಳೆದ ಏಪ್ರಿಲ್ – ಮೇ ಅವಧಿಯಲ್ಲಿ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿತ್ತು. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ದೇಶದಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಕೊರತೆಯ ಕುರಿತು ಸಲ್ಲಿಕೆಯಾದ ಅನೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಂದು ವಿಶೇಷ ಸಮಿತಿಯನ್ನು ರಚನೆ ಮಾಡಿತ್ತು. ದೆಹಲಿಯಲ್ಲಿ ಲಭ್ಯವಿರುವ ಆಕ್ಸಿಜನ್, ದೆಹಲಿಯ ಅಗತ್ಯತೆಯನ್ನು ಆಡಿಟ್ ಮಾಡುವಂತೆ ಸಮಿತಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಸಮಿತಿಯು ತನಿಖೆ ನಡೆಸಿದ್ದು ದೆಹಲಿ ಸರ್ಕಾರ ತನಗೆ ಅಗತ್ಯವಿರುವುದಕ್ಕಿಂತ ಹೆಚ್ಚು ಆಕ್ಸಿಜನ್ ಬಳಸಿಕೊಂಡಿದೆ. ತನ್ನ ಅಗತ್ಯತೆಗಳನ್ನು ನಾಲ್ಕುಪಟ್ಟು ಹೆಚ್ಚು ಬಿಂಬಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

AIIMS ನಿರ್ದೇಶಕ ರಣದೀಪ್ ಗುಲೇರಿಯಾ, ದೆಹಲಿ ಸರ್ಕಾರದ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ, ಮಾಕ್ಸ್‌ ಹೆಲ್ತ್‌ಕೇರ್ ನಿರ್ದೇಶಕ  ಸಂದೀಪ್ ಬುದ್ಧಿರಾಜ ಮತ್ತು ಕೇಂದ್ರ ಜಲಶಕ್ತಿ ಸಚಿವಾಲಯದ ಕರ್ಯದರ್ಶಿ ಸುಬೋಧ್ ಯಾದವ್ ಅವರನ್ನೊಳಗೊಂಡ ಸಮಿತಿ ಈ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡಿದೆ.

ದೆಹಲಿ ಸರ್ಕಾರವು 1,140 ಮೆಟ್ರಿಕ್‌ ಟನ್ ಆಕ್ಸಿಜನ್‌ ದೆಹಲಿಗೆ ಅಗತ್ಯವಿದೆ ಎಂದು ಹೇಳಿಕೊಂಡಿತ್ತು. ವಾಸ್ತವದಲ್ಲಿ ದೆಹಲಿಗೆ ಅಗತ್ಯವಿರುವ ಆಕ್ಸಿಜನ್ ಕೇವಲ 289 ಮೆಟ್ರಿಕ್‌ ಟನ್ ಮಾತ್ರ. ದೆಹಲಿ ಸರ್ಕಾರ ಹೇಳಿರುವ ಆಕ್ಸಿಜನ್‌ಗೆ ಸಂಬಂಧಿಸಿದ ಅಂಕಿ ಸಂಖ್ಯೆಗಳು ವಾಸ್ತವಕ್ಕಿಂತ ನಾಲ್ಕುಪಟ್ಟು ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್‌ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ದೆಹಲಿ ನಗರದ ಸರಾಸರಿ ಆಕ್ಸಿಜನ್ ಬಳಕೆ 284 ಮೆಟ್ರಿಕ್‌ ಟನ್‌ ನಿಂದ 372 ಮೆಟ್ರಿಕ್‌ ಟನ್‌ ನಷ್ಟು ಇದೆ. ದೆಹಲಿಯು ಬಳಸಿಕೊಂಡ ಹೆಚ್ಚುವರಿ ಆಕ್ಸಿಜನ್ ಇತರ ರಾಜ್ಯಗಳ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಸಮಿತಿ ತಿಳಿಸಿದೆ.

ಸಿಂಘಾಲ್ ಆಸ್ಪತ್ರೆ, ಅರುಣಾ ಆಸಾಫಲಿ ಆಸ್ಪತ್ರೆ, ಇಎಸ್‌ಐಸಿ ಮೊಡೆಲ್‌ ಆಸ್ಪತ್ರೆ, ಲೈಫ್‌ರೇ ಆಸ್ಪತ್ರೆ ಸೇರಿ ದೆಹಲಿಯ ಕೆಲವು ಆಸ್ಪತ್ರೆಗಳು  ಕಡಿಮೆ ಬೆಡ್‌ಗಳನ್ನು ಹೊಂದಿದ್ದರೂ ಹೆಚ್ಚುವರಿ ಆಕ್ಸಿಜನ್‌ ಬಳಸಿಕೊಂಡಿವೆ. ಇದು ದೆಹಲಿಯಲ್ಲಿನ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಸಮಿತಿ ತಿಳಿಸಿದೆ.

ಏಪ್ರಿಲ್ 29 ರಿಂದ ಮೇ 10 ರ ವರೆಗಿನ ಅವಧಿಯಲ್ಲಿ ದೆಹಲಿಯಲ್ಲಿ ದಿನಕ್ಕೆ 350 ಮೆಟ್ರಿಕ್‌ ಟನ್‌ಗಿಂತ ಹೆಚ್ಚು ಆಕ್ಸಿಜನ್‌ ಬಳಕೆಯಾಗಿಲ್ಲ ಎಂದು ದೆಹಲಿ ಸರ್ಕಾರ ಇದುವರೆಗೆ ಹೇಳುತ್ತ ಬಂದಿದೆ.

ದೆಹಲಿಗೆ 700 ಮೆಟ್ರಿಕ್‌ ಟನ್ ಆಕ್ಸಿಜನ್‌  ಪೂರೈಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ದೆಹಲಿ ಸರ್ಕಾರ ತನ್ನ ಅಗತ್ಯತೆಗಿಂತ ಹೆಚ್ಚು ಆಕ್ಸಿಜನ್ ಬೇಡಿಕೆಯನ್ನು ಇಡುತ್ತಿದೆ ಎಂದು ಕೆಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದೇಶಿಸಿತ್ತು. ಜೂನ್‌ 30 ರಂದು  ಸುಪ್ರೀಂ ಕೋರ್ಟ್ ಅರ್ಜಿಯ ಮುಂದಿನ ವಿಚಾರಣೆಯನ್ನು ನಡೆಸಲಿದೆ.


ಇದನ್ನು ಓದಿ : Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...