Homeಮುಖಪುಟಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

- Advertisement -
- Advertisement -

ಕಳೆದ ಏಪ್ರಿಲ್ – ಮೇ ಅವಧಿಯಲ್ಲಿ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿತ್ತು. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ದೇಶದಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಕೊರತೆಯ ಕುರಿತು ಸಲ್ಲಿಕೆಯಾದ ಅನೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಂದು ವಿಶೇಷ ಸಮಿತಿಯನ್ನು ರಚನೆ ಮಾಡಿತ್ತು. ದೆಹಲಿಯಲ್ಲಿ ಲಭ್ಯವಿರುವ ಆಕ್ಸಿಜನ್, ದೆಹಲಿಯ ಅಗತ್ಯತೆಯನ್ನು ಆಡಿಟ್ ಮಾಡುವಂತೆ ಸಮಿತಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಸಮಿತಿಯು ತನಿಖೆ ನಡೆಸಿದ್ದು ದೆಹಲಿ ಸರ್ಕಾರ ತನಗೆ ಅಗತ್ಯವಿರುವುದಕ್ಕಿಂತ ಹೆಚ್ಚು ಆಕ್ಸಿಜನ್ ಬಳಸಿಕೊಂಡಿದೆ. ತನ್ನ ಅಗತ್ಯತೆಗಳನ್ನು ನಾಲ್ಕುಪಟ್ಟು ಹೆಚ್ಚು ಬಿಂಬಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

AIIMS ನಿರ್ದೇಶಕ ರಣದೀಪ್ ಗುಲೇರಿಯಾ, ದೆಹಲಿ ಸರ್ಕಾರದ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ, ಮಾಕ್ಸ್‌ ಹೆಲ್ತ್‌ಕೇರ್ ನಿರ್ದೇಶಕ  ಸಂದೀಪ್ ಬುದ್ಧಿರಾಜ ಮತ್ತು ಕೇಂದ್ರ ಜಲಶಕ್ತಿ ಸಚಿವಾಲಯದ ಕರ್ಯದರ್ಶಿ ಸುಬೋಧ್ ಯಾದವ್ ಅವರನ್ನೊಳಗೊಂಡ ಸಮಿತಿ ಈ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡಿದೆ.

ದೆಹಲಿ ಸರ್ಕಾರವು 1,140 ಮೆಟ್ರಿಕ್‌ ಟನ್ ಆಕ್ಸಿಜನ್‌ ದೆಹಲಿಗೆ ಅಗತ್ಯವಿದೆ ಎಂದು ಹೇಳಿಕೊಂಡಿತ್ತು. ವಾಸ್ತವದಲ್ಲಿ ದೆಹಲಿಗೆ ಅಗತ್ಯವಿರುವ ಆಕ್ಸಿಜನ್ ಕೇವಲ 289 ಮೆಟ್ರಿಕ್‌ ಟನ್ ಮಾತ್ರ. ದೆಹಲಿ ಸರ್ಕಾರ ಹೇಳಿರುವ ಆಕ್ಸಿಜನ್‌ಗೆ ಸಂಬಂಧಿಸಿದ ಅಂಕಿ ಸಂಖ್ಯೆಗಳು ವಾಸ್ತವಕ್ಕಿಂತ ನಾಲ್ಕುಪಟ್ಟು ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್‌ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ದೆಹಲಿ ನಗರದ ಸರಾಸರಿ ಆಕ್ಸಿಜನ್ ಬಳಕೆ 284 ಮೆಟ್ರಿಕ್‌ ಟನ್‌ ನಿಂದ 372 ಮೆಟ್ರಿಕ್‌ ಟನ್‌ ನಷ್ಟು ಇದೆ. ದೆಹಲಿಯು ಬಳಸಿಕೊಂಡ ಹೆಚ್ಚುವರಿ ಆಕ್ಸಿಜನ್ ಇತರ ರಾಜ್ಯಗಳ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಸಮಿತಿ ತಿಳಿಸಿದೆ.

ಸಿಂಘಾಲ್ ಆಸ್ಪತ್ರೆ, ಅರುಣಾ ಆಸಾಫಲಿ ಆಸ್ಪತ್ರೆ, ಇಎಸ್‌ಐಸಿ ಮೊಡೆಲ್‌ ಆಸ್ಪತ್ರೆ, ಲೈಫ್‌ರೇ ಆಸ್ಪತ್ರೆ ಸೇರಿ ದೆಹಲಿಯ ಕೆಲವು ಆಸ್ಪತ್ರೆಗಳು  ಕಡಿಮೆ ಬೆಡ್‌ಗಳನ್ನು ಹೊಂದಿದ್ದರೂ ಹೆಚ್ಚುವರಿ ಆಕ್ಸಿಜನ್‌ ಬಳಸಿಕೊಂಡಿವೆ. ಇದು ದೆಹಲಿಯಲ್ಲಿನ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಸಮಿತಿ ತಿಳಿಸಿದೆ.

ಏಪ್ರಿಲ್ 29 ರಿಂದ ಮೇ 10 ರ ವರೆಗಿನ ಅವಧಿಯಲ್ಲಿ ದೆಹಲಿಯಲ್ಲಿ ದಿನಕ್ಕೆ 350 ಮೆಟ್ರಿಕ್‌ ಟನ್‌ಗಿಂತ ಹೆಚ್ಚು ಆಕ್ಸಿಜನ್‌ ಬಳಕೆಯಾಗಿಲ್ಲ ಎಂದು ದೆಹಲಿ ಸರ್ಕಾರ ಇದುವರೆಗೆ ಹೇಳುತ್ತ ಬಂದಿದೆ.

ದೆಹಲಿಗೆ 700 ಮೆಟ್ರಿಕ್‌ ಟನ್ ಆಕ್ಸಿಜನ್‌  ಪೂರೈಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ದೆಹಲಿ ಸರ್ಕಾರ ತನ್ನ ಅಗತ್ಯತೆಗಿಂತ ಹೆಚ್ಚು ಆಕ್ಸಿಜನ್ ಬೇಡಿಕೆಯನ್ನು ಇಡುತ್ತಿದೆ ಎಂದು ಕೆಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದೇಶಿಸಿತ್ತು. ಜೂನ್‌ 30 ರಂದು  ಸುಪ್ರೀಂ ಕೋರ್ಟ್ ಅರ್ಜಿಯ ಮುಂದಿನ ವಿಚಾರಣೆಯನ್ನು ನಡೆಸಲಿದೆ.


ಇದನ್ನು ಓದಿ : Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...