Homeಮುಖಪುಟಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

- Advertisement -
- Advertisement -

ಕಳೆದ ಏಪ್ರಿಲ್ – ಮೇ ಅವಧಿಯಲ್ಲಿ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿತ್ತು. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ದೇಶದಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಕೊರತೆಯ ಕುರಿತು ಸಲ್ಲಿಕೆಯಾದ ಅನೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಂದು ವಿಶೇಷ ಸಮಿತಿಯನ್ನು ರಚನೆ ಮಾಡಿತ್ತು. ದೆಹಲಿಯಲ್ಲಿ ಲಭ್ಯವಿರುವ ಆಕ್ಸಿಜನ್, ದೆಹಲಿಯ ಅಗತ್ಯತೆಯನ್ನು ಆಡಿಟ್ ಮಾಡುವಂತೆ ಸಮಿತಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಸಮಿತಿಯು ತನಿಖೆ ನಡೆಸಿದ್ದು ದೆಹಲಿ ಸರ್ಕಾರ ತನಗೆ ಅಗತ್ಯವಿರುವುದಕ್ಕಿಂತ ಹೆಚ್ಚು ಆಕ್ಸಿಜನ್ ಬಳಸಿಕೊಂಡಿದೆ. ತನ್ನ ಅಗತ್ಯತೆಗಳನ್ನು ನಾಲ್ಕುಪಟ್ಟು ಹೆಚ್ಚು ಬಿಂಬಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

AIIMS ನಿರ್ದೇಶಕ ರಣದೀಪ್ ಗುಲೇರಿಯಾ, ದೆಹಲಿ ಸರ್ಕಾರದ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ, ಮಾಕ್ಸ್‌ ಹೆಲ್ತ್‌ಕೇರ್ ನಿರ್ದೇಶಕ  ಸಂದೀಪ್ ಬುದ್ಧಿರಾಜ ಮತ್ತು ಕೇಂದ್ರ ಜಲಶಕ್ತಿ ಸಚಿವಾಲಯದ ಕರ್ಯದರ್ಶಿ ಸುಬೋಧ್ ಯಾದವ್ ಅವರನ್ನೊಳಗೊಂಡ ಸಮಿತಿ ಈ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡಿದೆ.

ದೆಹಲಿ ಸರ್ಕಾರವು 1,140 ಮೆಟ್ರಿಕ್‌ ಟನ್ ಆಕ್ಸಿಜನ್‌ ದೆಹಲಿಗೆ ಅಗತ್ಯವಿದೆ ಎಂದು ಹೇಳಿಕೊಂಡಿತ್ತು. ವಾಸ್ತವದಲ್ಲಿ ದೆಹಲಿಗೆ ಅಗತ್ಯವಿರುವ ಆಕ್ಸಿಜನ್ ಕೇವಲ 289 ಮೆಟ್ರಿಕ್‌ ಟನ್ ಮಾತ್ರ. ದೆಹಲಿ ಸರ್ಕಾರ ಹೇಳಿರುವ ಆಕ್ಸಿಜನ್‌ಗೆ ಸಂಬಂಧಿಸಿದ ಅಂಕಿ ಸಂಖ್ಯೆಗಳು ವಾಸ್ತವಕ್ಕಿಂತ ನಾಲ್ಕುಪಟ್ಟು ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್‌ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ದೆಹಲಿ ನಗರದ ಸರಾಸರಿ ಆಕ್ಸಿಜನ್ ಬಳಕೆ 284 ಮೆಟ್ರಿಕ್‌ ಟನ್‌ ನಿಂದ 372 ಮೆಟ್ರಿಕ್‌ ಟನ್‌ ನಷ್ಟು ಇದೆ. ದೆಹಲಿಯು ಬಳಸಿಕೊಂಡ ಹೆಚ್ಚುವರಿ ಆಕ್ಸಿಜನ್ ಇತರ ರಾಜ್ಯಗಳ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಸಮಿತಿ ತಿಳಿಸಿದೆ.

ಸಿಂಘಾಲ್ ಆಸ್ಪತ್ರೆ, ಅರುಣಾ ಆಸಾಫಲಿ ಆಸ್ಪತ್ರೆ, ಇಎಸ್‌ಐಸಿ ಮೊಡೆಲ್‌ ಆಸ್ಪತ್ರೆ, ಲೈಫ್‌ರೇ ಆಸ್ಪತ್ರೆ ಸೇರಿ ದೆಹಲಿಯ ಕೆಲವು ಆಸ್ಪತ್ರೆಗಳು  ಕಡಿಮೆ ಬೆಡ್‌ಗಳನ್ನು ಹೊಂದಿದ್ದರೂ ಹೆಚ್ಚುವರಿ ಆಕ್ಸಿಜನ್‌ ಬಳಸಿಕೊಂಡಿವೆ. ಇದು ದೆಹಲಿಯಲ್ಲಿನ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಸಮಿತಿ ತಿಳಿಸಿದೆ.

ಏಪ್ರಿಲ್ 29 ರಿಂದ ಮೇ 10 ರ ವರೆಗಿನ ಅವಧಿಯಲ್ಲಿ ದೆಹಲಿಯಲ್ಲಿ ದಿನಕ್ಕೆ 350 ಮೆಟ್ರಿಕ್‌ ಟನ್‌ಗಿಂತ ಹೆಚ್ಚು ಆಕ್ಸಿಜನ್‌ ಬಳಕೆಯಾಗಿಲ್ಲ ಎಂದು ದೆಹಲಿ ಸರ್ಕಾರ ಇದುವರೆಗೆ ಹೇಳುತ್ತ ಬಂದಿದೆ.

ದೆಹಲಿಗೆ 700 ಮೆಟ್ರಿಕ್‌ ಟನ್ ಆಕ್ಸಿಜನ್‌  ಪೂರೈಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ದೆಹಲಿ ಸರ್ಕಾರ ತನ್ನ ಅಗತ್ಯತೆಗಿಂತ ಹೆಚ್ಚು ಆಕ್ಸಿಜನ್ ಬೇಡಿಕೆಯನ್ನು ಇಡುತ್ತಿದೆ ಎಂದು ಕೆಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದೇಶಿಸಿತ್ತು. ಜೂನ್‌ 30 ರಂದು  ಸುಪ್ರೀಂ ಕೋರ್ಟ್ ಅರ್ಜಿಯ ಮುಂದಿನ ವಿಚಾರಣೆಯನ್ನು ನಡೆಸಲಿದೆ.


ಇದನ್ನು ಓದಿ : Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...