Homeಮುಖಪುಟಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

ಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪದಲ್ಲಿ ನ್ಯೂಸ್‌ಕ್ಲಿಕ್ ಮಾನವ ಸಂಪನ್ಮೂಲ (ಹೆಚ್‌ಆರ್‌) ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಕ್ಷಮಾದಾನ ಪಡೆದಿದ್ದು, ಹಾಗಾಗಿ, ಬಿಡುಗಡೆ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

“ಚಕ್ರವರ್ತಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ‘ಅಭ್ಯಂತರವಿಲ್ಲ’ ಎಂದು ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ತಿಳಿಸಿದೆ. ಚಕ್ರವರ್ತಿ ಕೂಡ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್ 164 ಅಡಿಯಲ್ಲಿ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಪೀಠವು ಆದೇಶದಲ್ಲಿ ಹೇಳಿದೆ.

“ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿ ಮತ್ತು ಪ್ರಕರಣದ ಸಂಗತಿಗಳು ಹಾಗೂ ಸಂದರ್ಭಗಳ ಜೊತೆಗೆ ಪ್ರಾಸಿಕ್ಯೂಷನ್ ನೀಡಿದ ನಿರಾಕ್ಷೇಪಣೆಯನ್ನು ಹೈಕೋರ್ಟ್‌ ಪರಿಗಣಿಸಿದೆ. 25,000 ರೂಪಾಯಿಗಳ ‘ವೈಯಕ್ತಿಕ ಬಾಂಡ್’ ಒದಗಿಸಿದ ಬಳಿಕ ಚಕ್ರವರ್ತಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಬಹುದು” ಎಂದು ಹೈಕೋರ್ಟ್‌ ಹೇಳಿದೆ.

ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿಯನ್ನು ಗಮನಿಸಿದ ನ್ಯಾಯಮೂರ್ತಿ ಶರ್ಮಾ, “ಚಕ್ರವರ್ತಿ ಪೋಲಿಯೊ ಸಮಸ್ಯೆಗೆ ತುತ್ತಾಗಿದ್ದಾರೆ. ಅವರಿಗೆ ಪಾರ್ಶ್ವವಾಯು ಸಮಸ್ಯೆಯಾಗಿದ್ದು, 59% ಶಾಶ್ವತ ದೈಹಿಕ ಅಸಾಮರ್ಥ್ಯದಿಂದ ಬಳಲುತ್ತಿದ್ದಾರೆ. ಗಾಲಿಕುರ್ಚಿಯ ಮೇಲೆ ಅವಲಂಬಿತರಾಗಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯ ವಿಚಾರದಲ್ಲಿ ಪ್ರಾಸಿಕ್ಯೂಷನ್‌ನಿಂದ ತಕಾರಾರು ಬಂದಿಲ್ಲ. ಅರ್ಜಿದಾರರ ವೈದ್ಯಕೀಯ ಸ್ಥಿತಿಯು ವಿಶೇಷ ಪರಿಗಣನೆಗೆ ಅರ್ಹವಾಗಿದೆ. ಒಬ್ಬ ವ್ಯಕ್ತಿಯ ದೈಹಿಕ ಅಂಗವೈಕಲ್ಯವು ಆತನ ಯೋಗಕ್ಷೇಮ ಮತ್ತು ದೈನಂದಿನ ಕಾರ್ಯನಿರ್ವಹಣೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಂದರ್ಭಗಳಲ್ಲಿ ನ್ಯಾಯಾಲಯವು ನ್ಯಾಯಯುತವಾಗಿ ತನ್ನ ಜವಾಬ್ದಾರಿ ನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಚಕ್ರವರ್ತಿ ಅವರನ್ನು 2023ರ ಅಕ್ಟೋಬರ್ 3ರಂದು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿದ್ದರು. ಅವರಿಗೆ ಜನವರಿ 6ರಂದು ಕ್ಷಮಾದಾನ ನೀಡಿದ್ದ ಸೆಷನ್ಸ್‌ ನ್ಯಾಯಲಯ, “ಚಕ್ರವರ್ತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನೈಜ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ನೀಡಿದ ಹೇಳಿಕೆಯು ಉತ್ತಮ ಸಾಕ್ಷ್ಯವಾಗಿದೆ” ಎಂದು ಹೇಳಿತ್ತು.

ಚಕ್ರವರ್ತಿ ಅವರಿಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿತ್ತು. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭಗಳ ಸಂಪೂರ್ಣ ಮತ್ತು ನಿಜವಾದ ಮಾಹಿತಿಯನ್ನು ಬಹಿರಂಗಪಡಿಸಬೇಕು. ಉದ್ದೇಶಪೂರ್ವಕವಾಗಿ ಯಾವುದೇ ವಿಚಾರಗಳನ್ನು ಮರೆಮಾಚಬಾರದು. ಉದ್ದೇಶಪೂರ್ವಕವಾಗಿ ಸುಳ್ಳು ಪುರಾವೆಗಳನ್ನು ನೀಡಬಾರದು ಎಂದು ಹೇಳಿತ್ತು.

ಇದೇ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಕೂಡ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...