Homeಮುಖಪುಟಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

ಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ: ನ್ಯೂಸ್‌ಕ್ಲಿಕ್ ಹೆಚ್‌ಆರ್ ಮುಖ್ಯಸ್ಥ ಅಮಿತ್ ಚಕ್ರವರ್ತಿ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪದಲ್ಲಿ ನ್ಯೂಸ್‌ಕ್ಲಿಕ್ ಮಾನವ ಸಂಪನ್ಮೂಲ (ಹೆಚ್‌ಆರ್‌) ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿಯನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಕ್ಷಮಾದಾನ ಪಡೆದಿದ್ದು, ಹಾಗಾಗಿ, ಬಿಡುಗಡೆ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

“ಚಕ್ರವರ್ತಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ‘ಅಭ್ಯಂತರವಿಲ್ಲ’ ಎಂದು ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ತಿಳಿಸಿದೆ. ಚಕ್ರವರ್ತಿ ಕೂಡ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್ 164 ಅಡಿಯಲ್ಲಿ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಪೀಠವು ಆದೇಶದಲ್ಲಿ ಹೇಳಿದೆ.

“ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿ ಮತ್ತು ಪ್ರಕರಣದ ಸಂಗತಿಗಳು ಹಾಗೂ ಸಂದರ್ಭಗಳ ಜೊತೆಗೆ ಪ್ರಾಸಿಕ್ಯೂಷನ್ ನೀಡಿದ ನಿರಾಕ್ಷೇಪಣೆಯನ್ನು ಹೈಕೋರ್ಟ್‌ ಪರಿಗಣಿಸಿದೆ. 25,000 ರೂಪಾಯಿಗಳ ‘ವೈಯಕ್ತಿಕ ಬಾಂಡ್’ ಒದಗಿಸಿದ ಬಳಿಕ ಚಕ್ರವರ್ತಿ ಅವರನ್ನು ಬಂಧನದಿಂದ ಬಿಡುಗಡೆ ಮಾಡಬಹುದು” ಎಂದು ಹೈಕೋರ್ಟ್‌ ಹೇಳಿದೆ.

ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿಯನ್ನು ಗಮನಿಸಿದ ನ್ಯಾಯಮೂರ್ತಿ ಶರ್ಮಾ, “ಚಕ್ರವರ್ತಿ ಪೋಲಿಯೊ ಸಮಸ್ಯೆಗೆ ತುತ್ತಾಗಿದ್ದಾರೆ. ಅವರಿಗೆ ಪಾರ್ಶ್ವವಾಯು ಸಮಸ್ಯೆಯಾಗಿದ್ದು, 59% ಶಾಶ್ವತ ದೈಹಿಕ ಅಸಾಮರ್ಥ್ಯದಿಂದ ಬಳಲುತ್ತಿದ್ದಾರೆ. ಗಾಲಿಕುರ್ಚಿಯ ಮೇಲೆ ಅವಲಂಬಿತರಾಗಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯ ವಿಚಾರದಲ್ಲಿ ಪ್ರಾಸಿಕ್ಯೂಷನ್‌ನಿಂದ ತಕಾರಾರು ಬಂದಿಲ್ಲ. ಅರ್ಜಿದಾರರ ವೈದ್ಯಕೀಯ ಸ್ಥಿತಿಯು ವಿಶೇಷ ಪರಿಗಣನೆಗೆ ಅರ್ಹವಾಗಿದೆ. ಒಬ್ಬ ವ್ಯಕ್ತಿಯ ದೈಹಿಕ ಅಂಗವೈಕಲ್ಯವು ಆತನ ಯೋಗಕ್ಷೇಮ ಮತ್ತು ದೈನಂದಿನ ಕಾರ್ಯನಿರ್ವಹಣೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಂದರ್ಭಗಳಲ್ಲಿ ನ್ಯಾಯಾಲಯವು ನ್ಯಾಯಯುತವಾಗಿ ತನ್ನ ಜವಾಬ್ದಾರಿ ನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಚಕ್ರವರ್ತಿ ಅವರನ್ನು 2023ರ ಅಕ್ಟೋಬರ್ 3ರಂದು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿದ್ದರು. ಅವರಿಗೆ ಜನವರಿ 6ರಂದು ಕ್ಷಮಾದಾನ ನೀಡಿದ್ದ ಸೆಷನ್ಸ್‌ ನ್ಯಾಯಲಯ, “ಚಕ್ರವರ್ತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನೈಜ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ನೀಡಿದ ಹೇಳಿಕೆಯು ಉತ್ತಮ ಸಾಕ್ಷ್ಯವಾಗಿದೆ” ಎಂದು ಹೇಳಿತ್ತು.

ಚಕ್ರವರ್ತಿ ಅವರಿಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿತ್ತು. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭಗಳ ಸಂಪೂರ್ಣ ಮತ್ತು ನಿಜವಾದ ಮಾಹಿತಿಯನ್ನು ಬಹಿರಂಗಪಡಿಸಬೇಕು. ಉದ್ದೇಶಪೂರ್ವಕವಾಗಿ ಯಾವುದೇ ವಿಚಾರಗಳನ್ನು ಮರೆಮಾಚಬಾರದು. ಉದ್ದೇಶಪೂರ್ವಕವಾಗಿ ಸುಳ್ಳು ಪುರಾವೆಗಳನ್ನು ನೀಡಬಾರದು ಎಂದು ಹೇಳಿತ್ತು.

ಇದೇ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಕೂಡ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ಕೇಜ್ರಿವಾಲ್‌ ನ್ಯಾಯಾಂಗ ಬಂಧನದ ಅವಧಿ ಮೇ.20ರವರೆಗೆ ವಿಸ್ತರಣೆ: ಮಧ್ಯಂತರ ಜಾಮೀನು ನೀಡುತ್ತಾ ಸುಪ್ರೀಂಕೋರ್ಟ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...