Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...