Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...