Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...