Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...