Homeಮುಖಪುಟಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಪ್ರಕರಣ ಇತ್ಯರ್ಥಕ್ಕೆ ನ್ಯಾಯಾಲಯದ ಹೊರಗೆ ಸಂಧಾನ: ಹೈಕೋರ್ಟ್ ಕಳವಳ

ಅತ್ಯಾಚಾರ ಅಪರಾಧ ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ-ಹೈಕೋರ್ಟ್‌

- Advertisement -
- Advertisement -

“ಅತ್ಯಾಚಾರ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲ” ಎಂದು ಪ್ರತಿಪಾದಿಸಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಯ ನಡುವೆ ರಾಜಿ ಮಾಡಿಕೊಳ್ಳುವಂತೆ ಸೂಚಿಸಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಘನತೆ ಮತ್ತು ಹಕ್ಕುಗಳನ್ನು ಎತ್ತಿ ಹಿಡಿಯುವುದು ನ್ಯಾಯಾಂಗದ ಮೇಲಿದೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದು, ಅತ್ಯಾಚಾರದಂತಹ ಪ್ರಕರಣಗಳನ್ನು ನ್ಯಾಯಾಲಯದ ಹೊರಗಡೆ ಇತ್ಯರ್ಥಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಹೇಳುವುದು ಅಪರಾಧ ನ್ಯಾಯ ವ್ಯವಸ್ಥೆ ಮತ್ತು ನ್ಯಾಯಯುತ ವಿಚಾರಣೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ನ್ಯಾಯಾಲಯದ ಹೊರಗಡೆ ಅತ್ಯಾಚಾರ ಆರೋಪಿ ಮತ್ತು ಸಂತ್ರಸ್ತೆ ನಡುವೆ ರಾಜಿ ಮಾಡಿಕೊಳ್ಳಲಾಗಿದೆ. ಹಾಗಾಗಿ, ಆರೋಪಿಯ ವಿರುದ್ದದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ತಳ್ಳಿ ಹಾಕಿದೆ.

ವಿಚಾರಣಾ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ದಾಖಲಿಸಲು ಪ್ರಯತ್ನಿಸುತ್ತಿರುವ ನಡುವೆ, ಅದೇ ನ್ಯಾಯಾಲಯದ ನ್ಯಾಯಾಧೀಶರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿ ದಾಖಲಾಗಿರುವ ಪ್ರಕರಣವನ್ನು ಇತ್ಯರ್ಥಪಡಿಸಲು ಆರೋಪಿ ಮತ್ತು ಸಂತ್ರಸ್ತೆಗೆ ಸಲಹೆ ನೀಡಿದ್ದಾರೆ ಮತ್ತು ಸಹಾಯ ಮಾಡಿದ್ದಾರೆ ಎಂಬುದು ನಿಜವಾಗಿದ್ದರೆ, ಇದು ಅಪಾಯಕಾರಿ ನಡವಳಿಕೆ ಎಂದು ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಚಾರಣೆ ನ್ಯಾಯಯುತವಾಗಿ ನಡೆಯಲು ಪ್ರಕರಣವನ್ನು ಇನ್ನೊಬ್ಬರು ನ್ಯಾಯಾಧೀಶರಿಗೆ ವರ್ಗಾಯಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದ್ದಾರೆ.

ಆರೋಪಿಯು ಸಂತ್ರಸ್ತೆಯ ಒಪ್ಪಿಗೆಯಿಲ್ಲದೆ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಆಕೆಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ಆರೋಪಿ ತನ್ನ ಮೇಲಿನ ಎಫ್‌ಐಆರ್ ರದ್ದುಪಡಿಸಲು ಕೋರುವಾಗ, ನನ್ನ ಮತ್ತು ಸಂತ್ರಸ್ತೆಯ ನಡುವೆ ಏನೇ ನಡೆದರೂ ಅದಕ್ಕೆ ನಮ್ಮಿಬ್ಬರ ಒಪ್ಪಿಗೆಯಿದೆ. ನಾನು ಆಕೆಗೆ ಪರಿಹಾರವಾಗಿ 3.50 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದಾನೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಲಯ, ಕಾನೂನು ಪ್ರಕ್ರಿಯೆ ದುರುಪಯೋಗವಾಗುತ್ತಿರುವಾಗ ಮತ್ತು ಗರ್ಭಪಾತದಂತಹ ಅನಿವಾರ್ಯ ಸಂದರ್ಭಗಳಲ್ಲಿ ಹೊರತು, ಅತ್ಯಾಚಾರದ ಅಪರಾಧವನ್ನು ಸಂತ್ರಸ್ತೆ ಮತ್ತು ಆರೋಪಿ ನಡುವೆ ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿ ಮುಗಿಸಲು ಸಾಧ್ಯವಿಲ್ಲ ಎಂದಿದೆ.

ತನ್ನ ಮತ್ತು ಸಂತ್ರಸ್ತೆಯ ನಡುವೆ ನಡೆದಿರುವುದೆಲ್ಲ ಒಪ್ಪಿತ ಎಂದು ಆರೋಪಿ ವಾದಿಸಿದ್ದಾರೆ, ಹೀಗಿರುವಾಗ ಆತ ಆಕೆಗೆ 3.50 ಲಕ್ಷ ರೂ. ದುಡ್ಡು ಕೊಡುವ ಅಗತ್ಯವೇನಿದೆ? ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಒಪ್ಪಿತ ಸಂಬಂಧದ ರಾಜಿ ಸಂಧಾನವಲ್ಲ, ಒಂದು ರೀತಿಯ ಸೆಟಲ್‌ಮೆಂಟ್ ಎಂದು ಅನುಮಾನ ವ್ಯಕ್ತಪಡಿಸಿದೆ.

ಸಂತ್ರಸ್ತೆಯ ಹಿಂದಿನ ಹೇಳಿಕೆಗಳು ಒಪ್ಪಿತ ಸಂಬಂಧವನ್ನು ಸೂಚಿಸುತ್ತಿಲ್ಲ. ಇಲ್ಲಿ ಹಣದ ಆಮಿಷ ಒಡ್ಡಿರುವ ಸಾಧ್ಯತೆಯಿದೆ. ಆರೋಪಿ ಹೇಳುವಂತೆ ಸಂತ್ರಸ್ತೆ ಮತ್ತು ಆತನ ನಡುವೆ ಒಪ್ಪಿತ ಸಂಬಂಧ ನಡೆದಿದ್ದರೆ, ಆತ ತಪ್ಪು ಮಾಡಿರದಿದ್ದರೆ ದುಡ್ಡು ಕೊಡುವ ಅವಶ್ಯಕತೆ ಏನಿದೆ? ಆತ ತಪ್ಪು ಮಾಡಿದ್ದಾನೆ ಎಂದರ್ಥವಲ್ಲವೇ? ಇದು ಒಮ್ಮತ ಸಂಬಂಧ ಎಂಬ ಪ್ರತಿಪಾದನೆಗೆ ವಿರುದ್ದವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅತ್ಯಾಚಾರದ ಅಪರಾಧವು ಮಹಿಳೆಯ ದೈಹಿಕ ಸ್ವಾಯತ್ತತೆಯ ಘೋರ ಉಲ್ಲಂಘನೆಯಾಗಿದೆ. ಇದನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕೆ ಅವಕಾಶ ನೀಡುವುದು ಅತ್ಯಾಚಾರ ಸಂತ್ರಸ್ತೆಯ ನೋವುಗಳನ್ನು ಕಡೆಗಣಿಸಿದಂತೆ. ಆಕೆಯ ದುಃಖವನ್ನು ವ್ಯಾವಹಾರಿಕವಾಗಿ ಪರಿಗಣಿಸದಂತೆ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : 370ನೇ ವಿಧಿಯ ರದ್ದತಿಯನ್ನು ಟೀಕಿಸುವುದು, ಪಾಕಿಸ್ತಾನಿಗಳಿಗೆ ಸ್ವಾತಂತ್ರ್ಯ ದಿನದ ಶುಭಾಶಯ ಕೋರುವುದು ಅಪರಾಧವಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...