Homeಮುಖಪುಟಕೇಂದ್ರ ಸರ್ಕಾರಕ್ಕೆ 20,000 ರೂ.ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಕೇಂದ್ರ ಸರ್ಕಾರಕ್ಕೆ 20,000 ರೂ.ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೋರ್ವರಿಗೆ ಪಿಂಚಣಿ ನೀಡುವಲ್ಲಿ ಲೋಪದೋಷ ಮತ್ತು ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ 20,000 ರೂ.ದಂಡ ವಿಧಿಸಿದೆ.

ಸ್ವಾತಂತ್ರ ಹೋರಾಟಗಾರ ಉತ್ತಿಮ್ ಲಾಲ್ ಸಿಂಗ್ ಅವರು ಪಿಂಚಣಿ ವಿಳಂಬವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು, 40 ವರ್ಷಗಳಿಗೂ ಹೆಚ್ಚು ಕಾಲ ಸರಿಯಾದ ಪಿಂಚಣಿ ಪಡೆಯಲು ಕಾಯುವಂತೆ ಮಾಡಿರುವುದು ಸಂಪೂರ್ಣ ದುಃಖದ ಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದೆ.

ಇದಲ್ಲದೆ ಸ್ವತಂತ್ರ ಸೈನಿಕ ಸಮ್ಮಾನ್ ಪಿಂಚಣಿಯನ್ನು 12 ವಾರಗಳಲ್ಲಿ 1980ರ ಬಳಿಕದ ಬಡ್ಡಿಯೊಂದಿಗೆ ಸಿಂಗ್ ಅವರಿಗೆ ಪಾವತಿಸುವಂತೆ ಕೇಂದ್ರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸ್ವಾತಂತ್ರ್ಯ ಹೋರಾಟಗಾರರನ್ನು ನಡೆಸಿಕೊಳ್ಳುತ್ತಿರುವ ರೀತಿ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಸರಕಾರ ತೋರುತ್ತಿರುವ ನಿರ್ಲಕ್ಷ್ಯ ನೋಡುವುದು ನೋವಿನ ಸಂಗತಿಯಾಗಿದೆ. ಇದರಿಂದ ಕೇಂದ್ರ ಸರಕಾರಕ್ಕೆ ನ್ಯಾಯಾಲಯವು  20,000 ರೂಪಾಯಿಗಳ ದಂಡವನ್ನು ವಿಧಿಸುತ್ತದೆ ಮತ್ತು ಇಂದಿನಿಂದ 6 ವಾರಗಳಲ್ಲಿ ಅರ್ಜಿದಾರರಿಗೆ ಈ ವೆಚ್ಚವನ್ನು ಪಾವತಿಸಬೇಕು ಎಂದು ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ.

ಬಿಹಾರ ಸರ್ಕಾರವು  ಈ ಪ್ರಕರಣದಲ್ಲಿ 1985ರಲ್ಲಿ ಕೇಂದ್ರ ಸರ್ಕಾರಕ್ಕೆ ಅರ್ಜಿದಾರರ ಮೂಲ ದಾಖಲೆಗಳನ್ನು ಕಳುಹಿಸಿದೆ. ಆದರೆ ಅದು ಕೇಂದ್ರ ಸರ್ಕಾರದ ಬಳಿ ಇರುವಾಗ ಕಳೆದುಹೋಗಿವೆ. ಬಿಹಾರ ಸರ್ಕಾರವು ಅರ್ಜಿದಾರರ ಹೆಸರನ್ನು ಮತ್ತೊಮ್ಮೆ ಪರಿಶೀಲಿಸಿ 2022ರ ಜುಲೈ 14ರಂದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಿದೆ. ಆದರೆ ಪಿಂಚಣಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ಉತ್ತಿಮ್ ಲಾಲ್ ಸಿಂಗ್ ನಾನು 1927ರಲ್ಲಿ ಜನಿಸಿದೆ ಮತ್ತು ಕ್ವಿಟ್ ಇಂಡಿಯಾ ಚಳುವಳಿ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಇತರ ಚಳುವಳಿಗಳಲ್ಲಿ ಭಾಗವಹಿಸಿದ್ದೇನೆ ಎಂದು 1982ರಲ್ಲಿ ಸ್ವತಂತ್ರ ಸೈನಿಕ ಸಮ್ಮಾನ್ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಹೆಸರನ್ನು ಬಿಹಾರ ಸರ್ಕಾರವು ಫೆಬ್ರವರಿ 1983ರಲ್ಲಿ ಕೇಂದ್ರಕ್ಕೆ ಕಳುಹಿಸಿತ್ತು. ಆದರೆ ಪಿಂಚಣಿ ಬಿಡುಗಡೆಯಾಗಿರಲಿಲ್ಲ.

ಇದನ್ನು ಓದಿ: ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...