Homeಮುಖಪುಟಕೇಂದ್ರ ಸರ್ಕಾರಕ್ಕೆ 20,000 ರೂ.ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಕೇಂದ್ರ ಸರ್ಕಾರಕ್ಕೆ 20,000 ರೂ.ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೋರ್ವರಿಗೆ ಪಿಂಚಣಿ ನೀಡುವಲ್ಲಿ ಲೋಪದೋಷ ಮತ್ತು ನಿರ್ಲಕ್ಷ್ಯ ತೋರಿದ ಹಿನ್ನೆಲೆ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ 20,000 ರೂ.ದಂಡ ವಿಧಿಸಿದೆ.

ಸ್ವಾತಂತ್ರ ಹೋರಾಟಗಾರ ಉತ್ತಿಮ್ ಲಾಲ್ ಸಿಂಗ್ ಅವರು ಪಿಂಚಣಿ ವಿಳಂಬವನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಅವರ ಪೀಠವು, 40 ವರ್ಷಗಳಿಗೂ ಹೆಚ್ಚು ಕಾಲ ಸರಿಯಾದ ಪಿಂಚಣಿ ಪಡೆಯಲು ಕಾಯುವಂತೆ ಮಾಡಿರುವುದು ಸಂಪೂರ್ಣ ದುಃಖದ ಸ್ಥಿತಿಯನ್ನು ಪ್ರಸ್ತುತಪಡಿಸುತ್ತದೆ ಎಂದು ಹೇಳಿದೆ.

ಇದಲ್ಲದೆ ಸ್ವತಂತ್ರ ಸೈನಿಕ ಸಮ್ಮಾನ್ ಪಿಂಚಣಿಯನ್ನು 12 ವಾರಗಳಲ್ಲಿ 1980ರ ಬಳಿಕದ ಬಡ್ಡಿಯೊಂದಿಗೆ ಸಿಂಗ್ ಅವರಿಗೆ ಪಾವತಿಸುವಂತೆ ಕೇಂದ್ರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸ್ವಾತಂತ್ರ್ಯ ಹೋರಾಟಗಾರರನ್ನು ನಡೆಸಿಕೊಳ್ಳುತ್ತಿರುವ ರೀತಿ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಸರಕಾರ ತೋರುತ್ತಿರುವ ನಿರ್ಲಕ್ಷ್ಯ ನೋಡುವುದು ನೋವಿನ ಸಂಗತಿಯಾಗಿದೆ. ಇದರಿಂದ ಕೇಂದ್ರ ಸರಕಾರಕ್ಕೆ ನ್ಯಾಯಾಲಯವು  20,000 ರೂಪಾಯಿಗಳ ದಂಡವನ್ನು ವಿಧಿಸುತ್ತದೆ ಮತ್ತು ಇಂದಿನಿಂದ 6 ವಾರಗಳಲ್ಲಿ ಅರ್ಜಿದಾರರಿಗೆ ಈ ವೆಚ್ಚವನ್ನು ಪಾವತಿಸಬೇಕು ಎಂದು ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿದೆ.

ಬಿಹಾರ ಸರ್ಕಾರವು  ಈ ಪ್ರಕರಣದಲ್ಲಿ 1985ರಲ್ಲಿ ಕೇಂದ್ರ ಸರ್ಕಾರಕ್ಕೆ ಅರ್ಜಿದಾರರ ಮೂಲ ದಾಖಲೆಗಳನ್ನು ಕಳುಹಿಸಿದೆ. ಆದರೆ ಅದು ಕೇಂದ್ರ ಸರ್ಕಾರದ ಬಳಿ ಇರುವಾಗ ಕಳೆದುಹೋಗಿವೆ. ಬಿಹಾರ ಸರ್ಕಾರವು ಅರ್ಜಿದಾರರ ಹೆಸರನ್ನು ಮತ್ತೊಮ್ಮೆ ಪರಿಶೀಲಿಸಿ 2022ರ ಜುಲೈ 14ರಂದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಿದೆ. ಆದರೆ ಪಿಂಚಣಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.

ಉತ್ತಿಮ್ ಲಾಲ್ ಸಿಂಗ್ ನಾನು 1927ರಲ್ಲಿ ಜನಿಸಿದೆ ಮತ್ತು ಕ್ವಿಟ್ ಇಂಡಿಯಾ ಚಳುವಳಿ ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಇತರ ಚಳುವಳಿಗಳಲ್ಲಿ ಭಾಗವಹಿಸಿದ್ದೇನೆ ಎಂದು 1982ರಲ್ಲಿ ಸ್ವತಂತ್ರ ಸೈನಿಕ ಸಮ್ಮಾನ್ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಹೆಸರನ್ನು ಬಿಹಾರ ಸರ್ಕಾರವು ಫೆಬ್ರವರಿ 1983ರಲ್ಲಿ ಕೇಂದ್ರಕ್ಕೆ ಕಳುಹಿಸಿತ್ತು. ಆದರೆ ಪಿಂಚಣಿ ಬಿಡುಗಡೆಯಾಗಿರಲಿಲ್ಲ.

ಇದನ್ನು ಓದಿ: ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...