Homeಮುಖಪುಟಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17) ಸಮನ್ಸ್ ಜಾರಿ ಮಾಡಿದೆ ಎಂದು livelaw.in ವರದಿ ಮಾಡಿದೆ.

ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು ಈ ವಿಷಯದಲ್ಲಿ ಯಾವುದೇ ಮಧ್ಯಂತರ ಪರಿಹಾರವನ್ನು ನೀಡಿಲ್ಲ. ತಾತ್ಕಾಲಿಕ ತಡೆಯಾಜ್ಞೆ ಅರ್ಜಿಯ ಮೇಲೆ ಕೇವಲ ನೋಟಿಸ್ ಮಾತ್ರ ಜಾರಿ ಮಾಡಿದ್ದಾರೆ ಎಂದು ವರದಿ ಹೇಳಿದೆ.

“ಆ ವರದಿಗೆ ತಡೆ ನೀಡುತ್ತೀರಾ ಎಂದು ನಾನು ಕೇಳುತ್ತಿದ್ದೇನೆ. ಯಾಕೆಂದರೆ, ಆ ಸುಳ್ಳು ಸುದ್ದಿಯಿಂದ ನಮಗೆ ನಿರಂತರವಾಗಿ ಕೆಟ್ಟ ಹೆಸರು ಬರುತ್ತಿದೆ. ಅದು ಸುಳ್ಳು ಸುದ್ದಿ ಎಂದು ಗೊತ್ತಿದ್ದರೂ ಸಹ, ಜನರು ಇನ್ನೂ ಅದರ ಬಗ್ಗೆಯೇ ಮಾತನಾಡುತ್ತಿದ್ದಾರೆ. ಇದರಿಂದ ನಮಗೆ ಹಾನಿಯಾಗುತ್ತಿದೆ” ಎಂದು ಕಾಂಗ್ರೆಸ್ ಪರ ವಕೀಲರಾದ ಮೊಹಮ್ಮದ್ ಅಲಿ ಖಾನ್ ಅವರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಆದರೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಲು ನಿರ್ಧರಿಸಿ, “ಇದನ್ನು ಅಧಿಕೃತವಾಗಿ ಸಿವಿಲ್ ಮೊಕದ್ದಮೆಯಾಗಿ ದಾಖಲಿಸಿಕೊಳ್ಳಿ. ಎಲ್ಲಾ ಮಾರ್ಗಗಳ ಮೂಲಕ ಪ್ರತಿವಾದಿಗಳಿಗೆ (ಅರ್ನಾಬ್ ಮತ್ತು ರಿಪಬ್ಲಿಕ್ ಟಿವಿ) ಸಮನ್ಸ್ ನೀಡಿ. ಅವರು 30 ದಿನಗಳ ಒಳಗೆ ಲಿಖಿತ ಉತ್ತರ ನೀಡಬೇಕು. ಹಾಗೆಯೇ, ವರದಿಗೆ ತಡೆ ನೀಡಬೇಕೆಂಬ (ಮಧ್ಯಂತರ ತಡೆಯಾಜ್ಞೆ) ಅರ್ಜಿಯ ಬಗ್ಗೆಯೂ ನೋಟಿಸ್ ನೀಡಿ. ಅದಕ್ಕೆ ಅವರು 4 ವಾರಗಳ ಒಳಗೆ ಪ್ರತಿಕ್ರಿಯಿಸಲಿ” ಎಂದಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 19ಕ್ಕೆ ನಿಗದಿಪಡಿಸಲಾಗಿದೆ

ವಿವಾದಿತ ವರದಿಯು ಕಳೆದ ವರ್ಷದ ಮೇ ತಿಂಗಳಿನಲ್ಲಿ ಪ್ರಸಾರವಾಗಿತ್ತು. ಅರ್ನಾಬ್ ಗೋಸ್ವಾಮಿ ಅವರು ತಮ್ಮ ಕಾರ್ಯಕ್ರಮದಲ್ಲಿ, ಟರ್ಕಿಯ ಇಸ್ತಾಂಬುಲ್‌ನಲ್ಲಿರುವ ‘ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್’ ಎಂಬ ಕಟ್ಟಡದ ದೃಶ್ಯಗಳನ್ನು ತೋರಿಸುತ್ತಾ, “ವೀಕ್ಷಕರೇ ನಿಮಗೆ ಗೊತ್ತೇ? ಕಾಂಗ್ರೆಸ್ ಪಕ್ಷವು ಟರ್ಕಿಯಲ್ಲಿ ತನ್ನ ಅಂತಾರಾಷ್ಟ್ರೀಯ ಕಚೇರಿಯನ್ನು ಹೊಂದಿದೆ” ಎಂದು ಹೇಳಿದ್ದರು.

ನಂತರ, ರಿಪಬ್ಲಿಕ್ ಟಿವಿ ಟರ್ಕಿಯಲ್ಲಿ ಕಾಂಗ್ರೆಸ್ ಕಚೇರಿ ಎಂದು ಒಂದು ಕಟ್ಟಡವನ್ನು ತಪ್ಪಾಗಿ ತೋರಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಕ್ಷಮೆಯಾಚಿಸಿತ್ತು.

ಡಿಜಿಟಲ್ ಡೆಸ್ಕ್‌ನ ವಿಡಿಯೋ ಎಡಿಟರ್ ಒಬ್ಬರು ತಾಂತ್ರಿಕ ದೋಷದಿಂದ ತಪ್ಪಾದ ಚಿತ್ರವನ್ನು ಬಳಸಿದ್ದಾರೆ ಎಂದು ವಾಹಿನಿ ಸಮರ್ಥಿಸಿಕೊಂಡಿತ್ತು.

ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ಕೋಶದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ಮೇ 22, 2025 ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

ದೂರಿನಲ್ಲಿ, ಬಿಜೆಪಿ ವಕ್ತಾರ ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ಅವರು ಸೇರಿಕೊಂಡು ಒಂದು ‘ಅಪರಾಧ ಮನೋಭಾವದ ಸಂಚು’ ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಟರ್ಕಿಯ ‘ಇಸ್ತಾಂಬುಲ್ ಕಾಂಗ್ರೆಸ್ ಸೆಂಟರ್’ ಅನ್ನು ಕಾಂಗ್ರೆಸ್ ಪಕ್ಷದ ಅಂತಾರಾಷ್ಟ್ರೀಯ ಕಚೇರಿ ಎಂದು ಬಿಂಬಿಸುವ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂದು ಹೇಳಲಾಗಿತ್ತು.

Courtesy :livelaw.in

 



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...