Homeಮುಖಪುಟಕೇಜ್ರಿವಾಲ್‌ಗೆ "ಮಧ್ಯಂತರ ಜಾಮೀನು" ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

ಕೇಜ್ರಿವಾಲ್‌ಗೆ “ಮಧ್ಯಂತರ ಜಾಮೀನು” ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವವರೆಗೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿ “ಮಧ್ಯಂತರ ಜಾಮೀನು” ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಅರ್ಜಿದಾರನಿಗೆ 75,000ರೂ. ದಂಡವನ್ನು ವಿಧಿಸಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ನ್ಯಾಯಾಲಯವು ಹೇಳಿದ್ದು, ಅರ್ಜಿದಾರರಿಗೆ 75,000ರೂ.ದಂಡವನ್ನು ವಿಧಿಸಿದೆ.

‘ವೀ ದಿ ಪೀಪಲ್ ಆಫ್ ಇಂಡಿಯಾ’ ಎಂಬ ಹೆಸರಿನಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯನ್ನು ಸಮರ್ಥನೀಯವಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಲಯವು ತನ್ನ ರಿಟ್ ವ್ಯಾಪ್ತಿಯಲ್ಲಿರುವ ಪ್ರಕರಣಗಳಲ್ಲಿ ಉನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿಯೆಂದು ಆರೋಪಿಗೆ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಕಿಂಗ್‌ಪಿನ್‌ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು ಮತ್ತು ಈ ಕುರಿತ ಮೂರನೇ ಅರ್ಜಿದಾರರಿಗೆ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇದನ್ನು ಓದಿ: ದ್ವೇಷ ಭಾಷಣಕ್ಕಾಗಿ ನಿಷೇಧಕ್ಕೊಳಗಾಗಿದ್ದ ಬಾಳ್ ಠಾಕ್ರೆ: ಮೋದಿ ಬಗ್ಗೆ ಚುನಾವಣಾ ಆಯೋಗದ ನಿಲುವೇನು? ಕಾನೂನು ಏನು ಹೇಳುತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...