Homeಮುಖಪುಟಕೇಜ್ರಿವಾಲ್‌ಗೆ "ಮಧ್ಯಂತರ ಜಾಮೀನು" ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

ಕೇಜ್ರಿವಾಲ್‌ಗೆ “ಮಧ್ಯಂತರ ಜಾಮೀನು” ಕೋರಿ ಸಲ್ಲಿಸಿದ ಪಿಐಎಲ್‌ ವಜಾ: ಅರ್ಜಿದಾರನಿಗೆ 75,000ರೂ.ದಂಡ ವಿಧಿಸಿದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುವವರೆಗೆ ಜಾರಿ ನಿರ್ದೇಶನಾಲಯ ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿ “ಮಧ್ಯಂತರ ಜಾಮೀನು” ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಅರ್ಜಿದಾರನಿಗೆ 75,000ರೂ. ದಂಡವನ್ನು ವಿಧಿಸಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ನ್ಯಾಯಾಲಯವು ಹೇಳಿದ್ದು, ಅರ್ಜಿದಾರರಿಗೆ 75,000ರೂ.ದಂಡವನ್ನು ವಿಧಿಸಿದೆ.

‘ವೀ ದಿ ಪೀಪಲ್ ಆಫ್ ಇಂಡಿಯಾ’ ಎಂಬ ಹೆಸರಿನಲ್ಲಿ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯನ್ನು ಸಮರ್ಥನೀಯವಲ್ಲ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಲಯವು ತನ್ನ ರಿಟ್ ವ್ಯಾಪ್ತಿಯಲ್ಲಿರುವ ಪ್ರಕರಣಗಳಲ್ಲಿ ಉನ್ನತ ಹುದ್ದೆಯನ್ನು ಹೊಂದಿರುವ ವ್ಯಕ್ತಿಯೆಂದು ಆರೋಪಿಗೆ ಮಧ್ಯಂತರ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ  ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ದೆಹಲಿಯ ಮಧ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್‌ ಕಿಂಗ್‌ಪಿನ್‌ ಎಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಹೇಳಿದ್ದು, 2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಇಡಿ ಆರೋಪಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಬಂಧನವಾಗುತ್ತಿದ್ದಂತೆ ಈ ಹಿಂದೆ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಅವರನ್ನು ಸಿಎಂ ಹದ್ದೆಯಿಂದ ವಜಾಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಕೇಜ್ರಿವಾಲ್‌ ಅವರನ್ನು ಸಿಎಂ ಹುದ್ದೆಯಿಂದ ವಜಾಕ್ಕೆ ನಿರಾಕರಿಸಿತ್ತು. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿತ್ತು ಮತ್ತು ಈ ಕುರಿತ ಮೂರನೇ ಅರ್ಜಿದಾರರಿಗೆ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.

ಇದನ್ನು ಓದಿ: ದ್ವೇಷ ಭಾಷಣಕ್ಕಾಗಿ ನಿಷೇಧಕ್ಕೊಳಗಾಗಿದ್ದ ಬಾಳ್ ಠಾಕ್ರೆ: ಮೋದಿ ಬಗ್ಗೆ ಚುನಾವಣಾ ಆಯೋಗದ ನಿಲುವೇನು? ಕಾನೂನು ಏನು ಹೇಳುತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...