Homeಮುಖಪುಟಇಡಿ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್: ಸುಪ್ರೀಂ ಮೊರೆ ಹೋಗಲು ಮುಂದಾದ ಕೇಜ್ರಿವಾಲ್

ಇಡಿ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್: ಸುಪ್ರೀಂ ಮೊರೆ ಹೋಗಲು ಮುಂದಾದ ಕೇಜ್ರಿವಾಲ್

- Advertisement -
- Advertisement -

ಆಪಾದಿತ ಮದ್ಯ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೈಕೋರ್ಟ್ ಆದೇಶದ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು, ಏಪ್ರಿಲ್ 3 ರಂದು ತೀರ್ಪನ್ನು ಕಾಯ್ದಿರಿಸಿದರು.

ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಆದೇಶ ಸೇರಿದಂತೆ ವಿಚಾರಣಾ ನ್ಯಾಯಾಲಯದ ನಂತರದ ರಿಮಾಂಡ್ ಆದೇಶಗಳನ್ನು ನ್ಯಾಯಾಲಯ ಎತ್ತಿಹಿಡಿದಿದೆ.

ಬಿಜೆಪಿಯ ನಿಯಂತ್ರಣದಲ್ಲಿರುವ ಕೇಂದ್ರ ಸರ್ಕಾರವು ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಕೇಜ್ರಿವಾಲ್ ಅವರ ವಾದವನ್ನು ಒಪ್ಪಿಕೊಳ್ಳಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.

“ನ್ಯಾಯಾಧೀಶರು ಕಾನೂನಿಗೆ ಬದ್ಧರಾಗಿರುತ್ತಾರೆಯೇ ವಿನಃ, ರಾಜಕೀಯಕ್ಕಲ್ಲ. ಕಾನೂನು ತತ್ವಗಳ ಮೇಲೆ ತೀರ್ಪುಗಳನ್ನು ನೀಡಲಾಗುತ್ತದೆಯೇ ಹೊರತು, ರಾಜಕೀಯ ಪರಿಗಣನೆಗಳಿಗೆ ಅಲ್ಲ. ರಾಜಕೀಯ ಪರಿಗಣನೆಗಳು ಸಂಬಂಧವಿಲ್ಲದ ಕಾರಣ ನ್ಯಾಯಾಲಯದ ಮುಂದೆ ತರಲು ಸಾಧ್ಯವಿಲ್ಲ,” ಎಂದು ನ್ಯಾಯಾಧೀಶರು ಹೇಳಿದ್ದಾರೆ. ಇಡಿಯನ್ನು ಬಿಜೆಪಿಯ ಸಂಸ್ಥೆಯಾಗಿ ನೋಡಲು ಸಾಧ್ಯವಿಲ್ಲ ಎಂದಿದ್ದಾರೆ.

“ಪ್ರಸ್ತುತ ಪ್ರಕರಣವು ಕೇಂದ್ರ ಸರ್ಕಾರ ಮತ್ತು ಕೇಜ್ರಿವಾಲ್ ನಡುವಿನ ಪ್ರಕರಣವಲ್ಲ. ಕೇಜ್ರಿವಾಲ್ ಮತ್ತು ಇಡಿ ನಡುವಿನ ಪ್ರಕರಣವಾಗಿದೆ. ಯಾವುದೇ ಬಾಹ್ಯ ಅಂಶಗಳಿಂದ ಪ್ರಭಾವಿತವಾಗದಂತೆ ನ್ಯಾಯಾಲಯವು ಜಾಗರೂಕವಾಗಿರಬೇಕು” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅನುಮೋದಕರಾದ ರಾಘವ್ ಮಾಗುಂಟಾ ಮತ್ತು ಶರತ್ ರೆಡ್ಡಿ ಅವರ ಹೇಳಿಕೆಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲಾಗಿದೆ ಎಂದು ನ್ಯಾಯಾಲಯವು ಗಮನಿಸಿದೆ. ಅವು ವಿಶ್ವಾಸಾರ್ಹವಲ್ಲ ಎಂಬ ಕೇಜ್ರಿವಾಲ್ ಅವರ ವಾದವನ್ನು ತಳ್ಳಿ ಹಾಕಿದೆ.

ಹೇಳಿಕೆಗಳು ವಿಶ್ವಾಸಾರ್ಹವಾಗಿವೆಯೇ? ಮೇಲಿನ ವ್ಯಕ್ತಿಗಳು ತಮ್ಮ ನಿಲುವನ್ನು ಏಕೆ ಬದಲಾಯಿಸುತ್ತಿದ್ದಾರೆ? ಎಂಬುದು ಈ ಹಂತದಲ್ಲಿ ಹೈಕೋರ್ಟ್‌ನಲ್ಲಿ ಪರಿಶೀಲಿಸಬಹುದಾದ ವಿಷಯವಲ್ಲ. ಇದನ್ನು ವಿಚಾರಣಾ ನ್ಯಾಯಾಲಯವು ನಿರ್ಧರಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯವು ಸಾಮಾನ್ಯ ವ್ಯಕ್ತಿಗಳಿಗೆ ಪ್ರತ್ಯೇಕ ಕಾನೂನು ಮತ್ತು ಉನ್ನತ ವ್ಯಕ್ತಿಗಳಿಗೆ ಮತ್ತೊಂದು ಕಾನೂನುಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದಿದೆ.

ಹೈಕೋರ್ಟ್ ಆದೇಶದ ವಿರುದ್ದ ಆಮ್ ಆದ್ಮಿ ಪಕ್ಷ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದೆ ಎಂದು ತಿಳಿದು ಬಂದಿದೆ.

2021-22ರ ದೆಹಲಿ ಅಬಕಾರಿ ನೀತಿ ಒಳಗೊಂದ 600 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

ಇದನ್ನೂ ಓದಿ : ರಾಜೀವ್ ಚಂದ್ರಶೇಖರ್ ಅಫಿಡವಿಟ್ ಪರಿಶೀಲಿಸುವಂತೆ ತೆರಿಗೆ ಮಂಡಳಿಗೆ ಸೂಚಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...