Homeಮುಖಪುಟಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

- Advertisement -
- Advertisement -

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು(MAEF) ಮುಚ್ಚುವ ಕೇಂದ್ರ ವಕ್ಫ್ ಕೌನ್ಸಿಲ್‌ನ ಪ್ರಸ್ತಾವನೆಯನ್ನು ಅನುಮೋದಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಸರ್ಕಾರಿ ಧನಸಹಾಯದ ಸಂಸ್ಥೆಯಾಗಿದ್ದು, ಶಿಕ್ಷಣಕ್ಕಾಗಿ, ವಿಶೇಷವಾಗಿ ಮೌಲಾನಾ ಆಝಾದ್ ನ್ಯಾಷನಲ್ ಫೆಲೋಶಿಪ್‌ನಂತಹ ಯೋಜನೆಗಳನ್ನು ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಮೂಲಕ ನೀಡಲಾಗುತ್ತಿತ್ತು. ಆದರೆ 2022ರಲ್ಲಿ ಕೇಂದ್ರವು ಇದನ್ನು ಸ್ಥಗಿತಗೊಳಿಸಿತ್ತು.

ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸರ್ಕಾರಿ ವಕೀಲರನ್ನು ಕೇಳಿದೆ ಮತ್ತು ಮಾರ್ಚ್ 7ಕ್ಕೆ ಈ ಕುರಿತು ವಿಚಾರಣೆಯನ್ನು ಮುಂದೂಡಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು ಮುಚ್ಚುವ ಆದೇಶವು ಸಂಪೂರ್ಣವಾಗಿ ದುರುದ್ದೇಶಪೂರಿತ, ಫೌಂಡೇಶನ್‌ನ್ನು ಮುಚ್ಚುವ ನಿರ್ಧಾರ ಏಕಪಕ್ಷೀಯವಾಗಿದೆ ಹಾಗೂ ಅರ್ಹ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನದಿಂದ ವಂಚಿತರನ್ನಾಗಿಸಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

1860ರ ಸೊಸೈಟಿಗಳ ನೋಂದಣಿ ಕಾಯಿದೆಯ ಸೆಕ್ಷನ್ 13ರ ಪ್ರಕಾರ, ನೋಂದಾಯಿಸಲಾದ ಯಾವುದೇ ಸೊಸೈಟಿಯ ವಿಸರ್ಜನೆಗೆ ಆ ಸೊಸೈಟಿಯ ಮೂರು-ಐದನೇ ಸದಸ್ಯರ ಸಮ್ಮತಿ ಬೇಕಾಗುತ್ತದೆ. ಅಲ್ಲದೆ, ಅದರ ಸ್ವತ್ತುಗಳನ್ನು ಇದೇ ರೀತಿಯ ಸೊಸೈಟಿಗೆ ವರ್ಗಾಯಿಸಬೇಕು ಮತ್ತು ಸೆಕ್ಷನ್ 14ರ ಪ್ರಕಾರ 3-4 ಸದಸ್ಯರ ಮತದಿಂದ ಅದನ್ನು ನಿರ್ಧರಿಸಬೇಕಾಗುತ್ತದೆ.

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF) ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿರುವ ಬಗ್ಗೆ ಈ ಮೊದಲು ವರದಿಯಾಗಿತ್ತು. ಫೆಬ್ರವರಿ 7ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ.669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಇದನ್ನು ಓದಿ: ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...