Homeಮುಖಪುಟಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಮೌಲಾನಾ ಆಝಾದ್ ಫೌಂಡೇಶನ್‌ ಮುಚ್ಚುವಂತೆ ಆದೇಶ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

- Advertisement -
- Advertisement -

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು(MAEF) ಮುಚ್ಚುವ ಕೇಂದ್ರ ವಕ್ಫ್ ಕೌನ್ಸಿಲ್‌ನ ಪ್ರಸ್ತಾವನೆಯನ್ನು ಅನುಮೋದಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಮನವಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಸರ್ಕಾರಿ ಧನಸಹಾಯದ ಸಂಸ್ಥೆಯಾಗಿದ್ದು, ಶಿಕ್ಷಣಕ್ಕಾಗಿ, ವಿಶೇಷವಾಗಿ ಮೌಲಾನಾ ಆಝಾದ್ ನ್ಯಾಷನಲ್ ಫೆಲೋಶಿಪ್‌ನಂತಹ ಯೋಜನೆಗಳನ್ನು ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ ಮೂಲಕ ನೀಡಲಾಗುತ್ತಿತ್ತು. ಆದರೆ 2022ರಲ್ಲಿ ಕೇಂದ್ರವು ಇದನ್ನು ಸ್ಥಗಿತಗೊಳಿಸಿತ್ತು.

ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಈ ಬಗ್ಗೆ ಮಾಹಿತಿಯನ್ನು ನೀಡುವಂತೆ ಸರ್ಕಾರಿ ವಕೀಲರನ್ನು ಕೇಳಿದೆ ಮತ್ತು ಮಾರ್ಚ್ 7ಕ್ಕೆ ಈ ಕುರಿತು ವಿಚಾರಣೆಯನ್ನು ಮುಂದೂಡಿದೆ.

ಮೌಲಾನಾ ಆಝಾದ್ ಎಜುಕೇಶನ್ ಫೌಂಡೇಶನ್‌ನ್ನು ಮುಚ್ಚುವ ಆದೇಶವು ಸಂಪೂರ್ಣವಾಗಿ ದುರುದ್ದೇಶಪೂರಿತ, ಫೌಂಡೇಶನ್‌ನ್ನು ಮುಚ್ಚುವ ನಿರ್ಧಾರ ಏಕಪಕ್ಷೀಯವಾಗಿದೆ ಹಾಗೂ ಅರ್ಹ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನದಿಂದ ವಂಚಿತರನ್ನಾಗಿಸಲಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

1860ರ ಸೊಸೈಟಿಗಳ ನೋಂದಣಿ ಕಾಯಿದೆಯ ಸೆಕ್ಷನ್ 13ರ ಪ್ರಕಾರ, ನೋಂದಾಯಿಸಲಾದ ಯಾವುದೇ ಸೊಸೈಟಿಯ ವಿಸರ್ಜನೆಗೆ ಆ ಸೊಸೈಟಿಯ ಮೂರು-ಐದನೇ ಸದಸ್ಯರ ಸಮ್ಮತಿ ಬೇಕಾಗುತ್ತದೆ. ಅಲ್ಲದೆ, ಅದರ ಸ್ವತ್ತುಗಳನ್ನು ಇದೇ ರೀತಿಯ ಸೊಸೈಟಿಗೆ ವರ್ಗಾಯಿಸಬೇಕು ಮತ್ತು ಸೆಕ್ಷನ್ 14ರ ಪ್ರಕಾರ 3-4 ಸದಸ್ಯರ ಮತದಿಂದ ಅದನ್ನು ನಿರ್ಧರಿಸಬೇಕಾಗುತ್ತದೆ.

ಮುಸ್ಲಿಮ್‌ ಸಮುದಾಯಕ್ಕೆ ಶಿಕ್ಷಣವನ್ನು ಉತ್ತೇಜಿಸುವ ದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಠಾನವನ್ನು(MAEF) ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಮುಚ್ಚುವಂತೆ ಆದೇಶಿಸಿರುವ ಬಗ್ಗೆ ಈ ಮೊದಲು ವರದಿಯಾಗಿತ್ತು. ಫೆಬ್ರವರಿ 7ರಂದು ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿ ಧೀರಜ್ ಕುಮಾರ್ ಅವರು ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

ಆದೇಶದ ಪ್ರಕಾರ, ನವೆಂಬರ್‌ 30, 2023ರಲ್ಲಿದ್ದಂತೆ ಫೌಂಡೇಶನ್‌ ಬಳಿ ರೂ.1,073.26 ಕೋಟಿ ನಿಧಿ ಇದ್ದು, ಬಾಧ್ಯತೆಗಳು ರೂ.40,355 ಕೋಟಿ ಆಗಿವೆ ಹಾಗೂ ಈ ಮೊತ್ತ ಕಳೆದರೆ ಉಳಿಯುವ ಮೊತ್ತ ರೂ.669.71 ಕೋಟಿ ಆಗಿದೆ. ಈ ನಿಧಿಯನ್ನು ಕನ್ಸಾಲಿಡೇಟೆಡ್‌ ಫಂಡ್ಸ್‌ ಆಫ್‌ ಇಂಡಿಯಾಗೆ ವರ್ಗಾಯಿಸುವ ಹಾಗೂ ಬಾಧ್ಯತೆಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಅಭಿವೃದ್ಧಿ ಮತ್ತು ಹಣಕಾಸು ಆಯೋಗಕ್ಕೆ ವರ್ಗಾಯಿಸುವ ಪ್ರಸ್ತಾಪವನ್ನು ಆದೇಶದಲ್ಲಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೌಲಾನಾ ಅಬ್ಧುಲ್‌ ಕಲಾಂ ಆಝಾದ್‌ ಪೌಂಡೇಶನ್‌ ಮುಸ್ಲಿಂ ಸಮುದಾಯದ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಡುವೆ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಸರ್ಕಾರದಿಂದ ಅನುದಾನಿತ ಸಂಸ್ಥೆಯಾಗಿದೆ. ಇದನ್ನು ಮೊದಲ ಶಿಕ್ಷಣ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಅವರ ಜನ್ಮ ಶತಮಾನೋತ್ಸವದಂದು 1989ರಲ್ಲಿ ಸ್ಥಾಪಿಸಲಾಗಿತ್ತು. ಇದರಡಿಯಲ್ಲಿ ಜೂನಿಯರ್ ಸಂಶೋಧನಾ ವಿದ್ಯಾರ್ಥಿಗಳಿಗೆ (ಜೆಆರ್‌ಎಫ್) ಮೊದಲ ಎರಡು ವರ್ಷಗಳವರೆಗೆ ಮಾಸಿಕ ರೂ.31,000 ನೀಡಿದರೆ, ಹಿರಿಯ ಸಂಶೋಧನಾ ವಿದ್ಯಾರ್ಥಿಗಳಿಗೆ (ಎಸ್‌ಆರ್‌ಎಫ್) ಉಳಿದ ಅವಧಿಗೆ ತಿಂಗಳಿಗೆ ರೂ.35,000 ನೀಡಲಾಗುತ್ತದೆ. 2021-22ರ ವರದಿಯಂತೆ ಮೌಲಾನಾ ಆಝಾದ್ ರಾಷ್ಟ್ರೀಯ ಫೆಲೋಶಿಪ್ 6,700 ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ, ಇದರ ಮೊತ್ತ 738.85 ಕೋಟಿ ರೂ.ಎಂದು ಹೇಳಲಾಗಿದೆ. ಆದರೆ ಈ ಯೋಜನೆಯನ್ನು 2022ರಲ್ಲಿ ನಿಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಗಳು ನಡೆದಿದ್ದವು.

ಇದನ್ನು ಓದಿ: ಟಿಆರ್‌ಪಿ ಹಗರಣ: ಅರ್ನಬ್‌ ಗೋಸ್ವಾಮಿ ವಿರುದ್ಧದ ಪ್ರಕರಣ ಹಿಂಪಡೆಯಲು ಅನುಮತಿಸಿದ ಕೋರ್ಟ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...