Homeಮುಖಪುಟ'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ಹಮ್ದರ್ದ್‌ನ ರೂಹ್‌ ಅಫ್ಝಾಗೆ ಕೋಮು ಬಣ್ಣ ಬೆರೆಸಿದ ಪ್ರಕರಣ

- Advertisement -
- Advertisement -

ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್‌ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತರಾಟೆಗೆ ತೆಗೆದುಕೊಂಡಿದೆ.

ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, ‘ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

“ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತದೆ. ಸಮರ್ಥನೀಯವಲ್ಲ” ಎಂದು ಹೇಳಿದ ನ್ಯಾಯಾಲಯ, ತಮ್ಮ ಕಕ್ಷಿದಾರರಿಂದ (ರಾಮ್‌ದೇವ್‌) ಸೂಚನೆಗಳನ್ನು ಪಡೆದು ಹಾಜರಾಗುವಂತೆ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ವರದಿಗಳ ಪ್ರಕಾರ, ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಾಮ್‌ದೇವ್ ತನ್ನ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಎಗ್ಗಿಲ್ಲದೆ ಮಾತನಾಡುತ್ತಿದ್ದಾರೆ ಮತ್ತು ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಇಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನದ ಮಿತಿಯನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಮಾನನಷ್ಟ ಕಾನೂನಿನಿಂದ ಇದಕ್ಕೆ ರಕ್ಷಣೆ ಇರುವುದಿಲ್ಲ” ಎಂದು ರೋಹಟಗಿ ವಾದಿಸಿದ್ದಾರೆ.

“ಇಂತಹ (ರಾಮ್‌ದೇವ್ ಹೇಳಿಕೆಯ) ವಿಡಿಯೋಗಳ ಪ್ರಸಾರಕ್ಕೆ ಒಂದು ಕ್ಷಣವೂ ಅನುಮತಿಸಬಾರದು. ದೇಶದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲೋಪತಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ರಾಮದೇವ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಕಠಿಣ ಶಿಕ್ಷೆಯನ್ನು ಎದುರಿಸಿದ್ದರು ಎಂದು ನ್ಯಾಯಾಲದ ಗಮನಕ್ಕೆ ತಂದಿದ್ದಾರೆ.

ಹಮ್ದರ್ದ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಂದೀಪ್ ಸೇಥಿ ಮತ್ತು ವಕೀಲರಾದ ಪ್ರವೀಣ್ ಆನಂದ್, ಧ್ರುವ ಆನಂದ್, ನಿಖಿಲ್ ರೋಹಟಗಿ, ಉದಿತಾ ಪಾತ್ರೋ, ಶಿವೇಂದ್ರ ಸಿಂಗ್ ಪ್ರತಾಪ್, ಧನಂಜಯ್ ಖನ್ನಾ, ನಿಮ್ರತ್ ಸಿಂಗ್, ಸಂಪೂರ್ಣ ಸನ್ಯಾಲ್, ನವದೀಪ್ ಮತ್ತು ಮೆಹಕ್ ಖನ್ನಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಧರ್ಮದಿಂದಲ್ಲ, ಪ್ರತಿಭೆಯಿಂದ ಗುರುತಿಸಿ | ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...