Homeಮುಖಪುಟ'ಶರಬತ್ ಜಿಹಾದ್' ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

‘ಶರಬತ್ ಜಿಹಾದ್’ ಹೇಳಿಕೆ ಆಘಾತಕಾರಿ: ಪತಂಜಲಿಯ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತರಾಟೆ

ಹಮ್ದರ್ದ್‌ನ ರೂಹ್‌ ಅಫ್ಝಾಗೆ ಕೋಮು ಬಣ್ಣ ಬೆರೆಸಿದ ಪ್ರಕರಣ

- Advertisement -
- Advertisement -

ಔಷಧ ಮತ್ತು ಆಹಾರ ಕಂಪನಿ ಹಮ್ದರ್ದ್‌ ಮತ್ತು ಅದರ ಜನಪ್ರಿಯ ಪಾನೀಯ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು ಕೋಮು ನಿಂದನೆಯ ಹೇಳಿಕೆ ನೀಡಿದ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮದೇವ್ ಅವರನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏ.22) ತರಾಟೆಗೆ ತೆಗೆದುಕೊಂಡಿದೆ.

ಪತಂಜಲಿ ಸಂಸ್ಥೆ ಮತ್ತು ರಾಮ್‌ದೇವ್ ವಿರುದ್ಧ ಹಮ್ದರ್ದ್ ದಾಖಲಿಸಿದ್ದ ಮೊಕದ್ದಮೆಯ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಅವರು, ‘ಕಠಿಣ ಆದೇಶದ’ ಎಚ್ಚರಿಕೆ ನೀಡಿದ್ದಾರೆ ಎಂದು barandbench.com ವರದಿ ಮಾಡಿದೆ.

“ಇದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತವನ್ನುಂಟುಮಾಡುತ್ತದೆ. ಸಮರ್ಥನೀಯವಲ್ಲ” ಎಂದು ಹೇಳಿದ ನ್ಯಾಯಾಲಯ, ತಮ್ಮ ಕಕ್ಷಿದಾರರಿಂದ (ರಾಮ್‌ದೇವ್‌) ಸೂಚನೆಗಳನ್ನು ಪಡೆದು ಹಾಜರಾಗುವಂತೆ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ವರದಿಗಳ ಪ್ರಕಾರ, ರಾಮದೇವ್ ವಿರುದ್ಧ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಳೆದ ವಾರ ಭೋಪಾಲ್‌ನಲ್ಲಿ ಧಾರ್ಮಿಕ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದರು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ರಾಮ್‌ದೇವ್ ತನ್ನ ಕೋಮುವಾದಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ತಮ್ಮ ವಿಡಿಯೋದಲ್ಲಿ ಯಾವುದೇ ನಿರ್ದಿಷ್ಟ ಬ್ರ್ಯಾಂಡ್ ಅನ್ನು ಹೆಸರಿಸಿಲ್ಲ ಎಂದಿದ್ದರು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ರಾಮದೇವ್ ಹಮ್ದರ್ದ್ ವಿರುದ್ಧ ಎಗ್ಗಿಲ್ಲದೆ ಮಾತನಾಡುತ್ತಿದ್ದಾರೆ ಮತ್ತು ಕಂಪನಿಯ ಮಾಲೀಕರ ಧರ್ಮದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಇಂದು ಹೈಕೋರ್ಟ್‌ಗೆ ತಿಳಿಸಿದ್ದಾರೆ.

“ಇದು ಆಘಾತಕಾರಿ ಪ್ರಕರಣವಾಗಿದ್ದು, ಅವಹೇಳನದ ಮಿತಿಯನ್ನು ಮೀರಿದೆ. ಇದು ದ್ವೇಷ ಭಾಷಣದಂತೆಯೇ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ. ಮಾನನಷ್ಟ ಕಾನೂನಿನಿಂದ ಇದಕ್ಕೆ ರಕ್ಷಣೆ ಇರುವುದಿಲ್ಲ” ಎಂದು ರೋಹಟಗಿ ವಾದಿಸಿದ್ದಾರೆ.

“ಇಂತಹ (ರಾಮ್‌ದೇವ್ ಹೇಳಿಕೆಯ) ವಿಡಿಯೋಗಳ ಪ್ರಸಾರಕ್ಕೆ ಒಂದು ಕ್ಷಣವೂ ಅನುಮತಿಸಬಾರದು. ದೇಶದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿವೆ. ಹಿಮಾಲಯ ಎಂಬ ಮತ್ತೊಂದು ಕಂಪನಿ ಮುಸ್ಲಿಂ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ರಾಮದೇವ್ ಅದರ ಮೇಲೆಯೂ ದಾಳಿ ನಡೆಸಿದ್ದಾರೆ” ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಲೋಪತಿಯನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ರಾಮದೇವ್ ಅವರು ಈ ಹಿಂದೆ ಸುಪ್ರೀಂ ಕೋರ್ಟ್‌ನಿಂದ ಕಠಿಣ ಶಿಕ್ಷೆಯನ್ನು ಎದುರಿಸಿದ್ದರು ಎಂದು ನ್ಯಾಯಾಲದ ಗಮನಕ್ಕೆ ತಂದಿದ್ದಾರೆ.

ಹಮ್ದರ್ದ್ ಪರವಾಗಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಂದೀಪ್ ಸೇಥಿ ಮತ್ತು ವಕೀಲರಾದ ಪ್ರವೀಣ್ ಆನಂದ್, ಧ್ರುವ ಆನಂದ್, ನಿಖಿಲ್ ರೋಹಟಗಿ, ಉದಿತಾ ಪಾತ್ರೋ, ಶಿವೇಂದ್ರ ಸಿಂಗ್ ಪ್ರತಾಪ್, ಧನಂಜಯ್ ಖನ್ನಾ, ನಿಮ್ರತ್ ಸಿಂಗ್, ಸಂಪೂರ್ಣ ಸನ್ಯಾಲ್, ನವದೀಪ್ ಮತ್ತು ಮೆಹಕ್ ಖನ್ನಾ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಧರ್ಮದಿಂದಲ್ಲ, ಪ್ರತಿಭೆಯಿಂದ ಗುರುತಿಸಿ | ಮಾಜಿ ಮುಖ್ಯ ಚುನಾವಣಾ ಆಯುಕ್ತ ಖುರೈಷಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...