Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ವಿದೇಶಕ್ಕೆ ಪ್ರಯಾಣಿಸದಂತೆ ಏರ್‌‌ಪೋರ್ಟ್‌ನಲ್ಲೆ ತೆಡೆಯಲ್ಪಟ್ಟಿದ್ದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಷರತ್ತುಗಳಿಗೆ ಒಳಪಟ್ಟು ವಿದೇಶಕ್ಕೆ ಪ್ರಯಾಣಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಏಪ್ರಿಲ್ 1ರ ಮಂಗಳವಾರದಂದು ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿತ್ತು.

ಅವರು ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ತೆರಳಬೇಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಮಂಗಳವಾರ ಹೇಳಿದ್ದರು.

ಇದನ್ನೂ ಓದಿ: ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ಇಡಿ, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ’ಬುಲ್ಲಿ ಭಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...