Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಖ್ಯಾತ ಪತ್ರಕರ್ತೆ ರಾಣಾ ಅಯೂಬ್‌‌ಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ವಿದೇಶಕ್ಕೆ ಪ್ರಯಾಣಿಸದಂತೆ ಏರ್‌‌ಪೋರ್ಟ್‌ನಲ್ಲೆ ತೆಡೆಯಲ್ಪಟ್ಟಿದ್ದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಷರತ್ತುಗಳಿಗೆ ಒಳಪಟ್ಟು ವಿದೇಶಕ್ಕೆ ಪ್ರಯಾಣಿಸಲು ದೆಹಲಿ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಏಪ್ರಿಲ್ 1ರ ಮಂಗಳವಾರದಂದು ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದರು. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿತ್ತು.

ಅವರು ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ತೆರಳಬೇಕಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಮಂಗಳವಾರ ಹೇಳಿದ್ದರು.

ಇದನ್ನೂ ಓದಿ: ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ಇಡಿ, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಪ್ರಣಬ್ ಮುಖರ್ಜಿ ನಿಧನಕ್ಕೆ ಪತ್ರಕರ್ತೆ ರಾಣಾ ಅಯೂಬ್ ಸಂತಸಪಟ್ಟಿದ್ದು ಸುಳ್ಳುಸುದ್ದಿ

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ’ಬುಲ್ಲಿ ಭಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...