Homeಕರೋನಾ ತಲ್ಲಣಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಶಾಲಾ ಶುಲ್ಕ ಮನ್ನಾ ಮಾಡುವ ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ಅಧ್ಯಕ್ಷತೆಯ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠವು ಅರ್ಜಿಯನ್ನು ಮುಂದುವರಿಸಲು ನಿರಾಕರಿಸಿತು.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಡುವೆ ಆಗಸ್ಟ್ ತಿಂಗಳಿಗೆ ಶಾಲೆಗಳು ವಿಧಿಸುವ ಬೋಧನಾ ಶುಲ್ಕವನ್ನು ಮನ್ನಾ ಮಾಡುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ. ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅಧ್ಯಕ್ಷತೆಯ ನ್ಯಾಯಾಲಯದ ವಿಭಾಗೀಯ ನ್ಯಾಯಪೀಠವು ಅರ್ಜಿಯನ್ನು ಮುಂದುವರಿಸಲು ನಿರಾಕರಿಸಿತು.

“ನ್ಯಾಯಾಲಯದ ಕೆಲಸ ಕಾರ್ಯಗಳ ಬಗ್ಗೆ ಅಗೌರವ ತೋರುವ ಅರ್ಜಿ” ಎಂದು ಇಬ್ಬರ ನ್ಯಾಯಾಧೀಶರ ಪೀಠವು ಹೇಳಿದ್ದು, ಈ ಅರ್ಜಿ ವಜಾಗೊಳ್ಳುವ ಬಗ್ಗೆ ಮೌಲ್ಯಮಾಪನ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಅದರ ನಂತರ ಅರ್ಜಿದಾರ ಮತ್ತು ವಕೀಲ ಎನ್. ಪ್ರದೀಪ್ ಶರ್ಮಾ ಅವರು ಈ ಅರ್ಜಿಯನ್ನು ಹಿಂಪಡೆಯಲು ಕೋರಿದರು ಮತ್ತು ಕ್ಷಮೆಯಾಚಿಸಿದರು.

ಪ್ರತಿಕೂಲ ಪರಿಸ್ಥಿತಿಯ ಸಂದರ್ಭದಲ್ಲಿ, ಆನ್‌ಲೈನ್ ತರಗತಿಗಳನ್ನು ಒದಗಿಸಲು ಶಾಲೆಯು ಬೋಧನಾ ಶುಲ್ಕವನ್ನು ವಿಧಿಸುತ್ತದೆ ಎಂಬ ಷರತ್ತು ಶಾಲೆಯ ಪ್ರವೇಶ ನಮೂನೆಯಲ್ಲಿ ಇಲ್ಲ ಎಂದು ಅರ್ಜಿಯಲ್ಲಿ ವಾದ ಮಾಡಲಾಗಿತ್ತು.

“ಶಾಲಾ ನಿಯಮಗಳ ಕೈಪಿಡಿ ಪ್ರಕಾರ ನಮೂದಿಸದೆ, ನಿಜವಾದ ಶಿಕ್ಷಣವನ್ನು ನೀಡದೆ ಬೋಧನಾ ಶುಲ್ಕವನ್ನು ಒತ್ತಾಯಿಸುವುದು ಒಪ್ಪಂದದ ವಿಷಯದಲ್ಲಿ ಮತ್ತು ನೈಸರ್ಗಿಕ ನ್ಯಾಯದ ತತ್ವಕ್ಕೆ ವಿರುದ್ಧವಾಗಿ ಉಲ್ಲಂಘನೆಯಾಗಿದೆ” ಎಂದು ಅರ್ಜಿದಾರರು ಹೇಳಿದರು.

ಈ ವರ್ಷದ ಏಪ್ರಿಲ್‌ನಲ್ಲಿ, ಲಾಕ್‌ಡೌನ್ ಅವಧಿಯಲ್ಲಿ (ನರೇಶ್ ಕುಮಾರ್ ವರ್ಸಸ್ ಡಿಒಇ) ಶಾಲೆಗಳಿಗೆ ಬೋಧನಾ ಶುಲ್ಕ ಸೇರಿದಂತೆ ಯಾವುದೇ ಶುಲ್ಕವನ್ನು ಪಾವತಿಸುವುದರಿಂದ ಸಂಪೂರ್ಣ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು.

ಮುಖ್ಯ ನ್ಯಾಯಮೂರ್ತಿ ಪಟೇಲ್ ಮತ್ತು ನ್ಯಾಯಮೂರ್ತಿ ಜಲನ್ ಅವರನ್ನು ಒಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠವು “ಶಾಲೆಗಳು ಆನ್‌ಲೈನ್ ಶಿಕ್ಷಣವನ್ನು ಒದಗಿಸುತ್ತಿರುವ ಸಂದರ್ಭದಲ್ಲಿ ಬೋಧನಾ ಶುಲ್ಕವನ್ನು ಪಡೆದುಕೊಳ್ಳುವುದನ್ನು ಲಾಕ್‌ಡೌನ್ ಅವಧಿಯಲ್ಲಿ ನಾವು ಒಪ್ಪಲು ಸಾಧ್ಯವಿಲ್ಲ. ಬೋಧನಾ ಶುಲ್ಕಕ್ಕೆ ವಿನಾಯಿತಿ ನೀಡಬೇಕು” ಎಂಬ ಅರ್ಜಿಯನ್ನು ತಿರಸ್ಕರಿಸಿದೆ. 

“ಆನ್ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವವರೆಗೂ ಶಾಲೆಗಳು ಅದಕ್ಕಾಗಿ ಬೋಧನಾ ಶುಲ್ಕವನ್ನು ಪಡೆಯಬಹುದು” ಎಂದು ಕೂಡ ವಿಭಾಗೀಯ ಪೀಠ ತಿಳಿಸಿದೆ.


ಇದನ್ನೂ ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...