Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...