Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...