Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...