Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...