Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...