Homeಮುಖಪುಟದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ದೆಹಲಿ ಘರ್ಷಣೆ: ಗಾಯಾಳುಗಳಿಗೆ ರಕ್ಷಣೆ ನೀಡಲು ಹೈಕೋರ್ಟ್‌ ತಡರಾತ್ರಿ ಆದೇಶ. ಸಾವಿನ ಸಂಖ್ಯೆ 17ಕ್ಕೆ ಏರಿಕೆ..

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ.

- Advertisement -
- Advertisement -

ಭಾನುವಾರದಿಂದ ದೆಹಲಿಯಲ್ಲಿ ಆರಂಭವಾಗಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 17 ಕ್ಕೆ ಏರಿದೆ. ಗಾಯಗೊಂಡವರ ಸಂಖ್ಯೆ 150 ಕ್ಕೂ ಹೆಚ್ಚಿದೆ. 16 ವರ್ಷದ ಬಾಲಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆಯೂ ತೀವ್ರ ಹಲ್ಲೆಯಾಗಿದೆ.

ಈ ನಡುವೆ ಗಾಯಗೊಂಡ ಮುಸ್ಲಿಮರನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲು ಸೂಕ್ತ ರಕ್ಷಣೆ ನೀಡಬೇಕೆಂದು ದೆಹಲಿ ಹೈಕೋರ್ಟ್‌ ತಡರಾತ್ರಿ ಆದೇಶದಲ್ಲಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಈ ಮೊದಲು ಈಶಾನ್ಯ ದೆಹಲಿಯ ಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆಯ ವೈದ್ಯರು ಸಂಜೆ 4 ಗಂಟೆಯಿಂದಲೂ ಸಹ ಪೊಲೀಸ್‌ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಆದರೆ ಪೊಲೀಸರು ರಕ್ಷಣೆ ಕೊಡಲು ನಿರಾಕರಿಸಿದ್ದರಿಂದ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು.

ಬುಧವಾರ ಮುಂಜಾನೆ 1:42 ಕ್ಕೆ ಕೊನೆಗೊಂಡ ತುರ್ತು ಸಭೆಯಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಈಶಾನ್ಯ ದೆಹಲಿಯ ಮುಸ್ತಾಬಾದ್‌ನಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಗಾಯಗೊಂಡ ಸುಮಾರು 20 ಜನರನ್ನು ತಕ್ಷಣ ಚಿಕಿತ್ಸೆಗಾಗಿ ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯುವಂತೆ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎಸ್.ಮುರಳಿಧರ್ ಮತ್ತು ನ್ಯಾಯಮೂರ್ತಿ ಎ.ಜೆ. ಭಂಭಾನಿಯವರ ಪೀಠವು ನ್ಯಾಯಮೂರ್ತಿ ಮುರಳೀಧರ್ ಅವರ ನಿವಾಸದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದೆ.

“ಇದು ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಜಿ.ಎಸ್. ಸಿಸ್ತಾನಿ ಅವರು ದೆಹಲಿಯಲ್ಲಿಲ್ಲದ ಕಾರಣದಿಂದ, ಅವರ ಆದೇಶದ ಮೇರೆಗೆ ನಮ್ಮಲ್ಲಿ ಒಬ್ಬರಾದ (ಎಸ್. ಮುರಳೀಧರ್, ಜೆ) ಅವರ ನಿವಾಸದಲ್ಲಿ ಬೆಳಿಗ್ಗೆ 12:30 ಕ್ಕೆ (26.2.2020) ಸಭೆ ಕರೆಯಲಾಗಿದೆ. ಎಸ್. ಮುರಳೀಧರ್, ಜೆರವರಿಗೆ ವಕೀಲ ಸುರೂರ್ ಮಾಂಡರ್ ಅವರು ಕರೆ ಮಾಡಿ “ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಗೆ ತೀವ್ರವಾಗಿ ಗಾಯಗೊಂಡ ಕೆಲವು ಗಾಯಾಳುಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಭೀಕರ ಸಂದರ್ಭಗಳನ್ನು ವಿವರಿಸಿದರು. ನ್ಯೂಮುಸ್ತಾಬಾದ್‌ನ ಅಲ್ ಹಿಂದ್ ಆಸ್ಪತ್ರೆ ಸಣ್ಣ ಆಸ್ಪತ್ರೆಯಾಗಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಸೌಲಭ್ಯಗಳ ಕೊರತೆಯಿದೆ. ಹಾಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಶಾದ್ ಗಾರ್ಡನ್‌ನ ಜಿಟಿಬಿ ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ಗಳಿಗೆ ರಕ್ಷಣೆ ಕೊಡುವಂತೆ ಪೊಲೀಸರಿಗೆ ಆದೇಶಿಸಲು ಮನವಿ ಮಾಡಿದ್ದರು”.

ಗಾಯಗೊಂಡ ರೋಗಿಗಳ ಸ್ಥಳಾಂತರಕ್ಕೆ ಪೊಲೀಸರು ಅಸಹಕಾರ ತೋರಿದ ಬೆನ್ನಲ್ಲಿ ಆಸ್ಪತ್ರೆಯ ಅಧಿಕಾರಿಗಳು ತಮ್ಮ ಸಂಕಟವನ್ನು ಎತ್ತಿ ಹಿಡಿಯಲು ಸಾಮಾಜಿಕ ಮಾಧ್ಯಮಗಳತ್ತ ಮುಖ ಮಾಡಿದ್ದರು.

ಈ ಕುರಿತ ತಡರಾತ್ರಿ ವಿಚಾರಣೆಯಲ್ಲಿ ಇಬ್ಬರು ನ್ಯಾಯಾಧೀಶರು ನಿರ್ದೇಶನ ನೀಡಿದ ನಂತರ ದೆಹಲಿ ಪೊಲೀಸ್ ಸಲಹೆಗಾರ ಸಂಜಯ್ ಘೋಶ್‌ ಮತ್ತು ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಅಲ್ ಹಿಂದ್ ಆಸ್ಪತ್ರೆಯ ಡಾ.ಅನ್ವರ್ ಅವರೊಂದಿಗೆ ಸ್ಪೀಕರ್ ಫೋನ್‌ನಲ್ಲಿ ಮಾತನಾಡಿ ರಕ್ಷಣೆ ನೀಡಲು ಒಪ್ಪಿಕೊಂಡಿದ್ದಾರೆ.

“ಅಲ್ ಹಿಂದ್ ಆಸ್ಪತ್ರೆಯಲ್ಲಿ ಸಂಜೆ 4 ಗಂಟೆಯಿಂದ ಡಾ. ಅನ್ವರ್ ಪೊಲೀಸರ್‌ ಸಹಾಯಕ್ಕಾಗಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಈ ನಡುವೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಇನ್ನು ಸುಮಾರು 22 ಮಂದಿ ಗಾಯಳುಗಳು ಚಿಕಿತ್ಸೆಯಲ್ಲಿದ್ದಾರೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪೊಲೀಸ್ ಉಪ ಆಯುಕ್ತ (ಅಪರಾಧ) ರಾಜೇಶ್ ಡಿಯೊ ಮತ್ತು ಡಿಸಿಪಿ (ಪೂರ್ವ) ದೀಪಕ್ ಗುಪ್ತಾ ಅವರು ತಕ್ಷಣ ಆಸ್ಪತ್ರೆಗೆ ತಲುಪುವಂತೆ ಸೂಚನೆ ನೀಡಲಾಯಿತು.

“ಈ ಹಂತದಲ್ಲಿ ನ್ಯಾಯಾಲಯವು ಪ್ರಾಥಮಿಕವಾಗಿ ಗಾಯಗೊಂಡವರ ಜೀವನದ ಸುರಕ್ಷತೆಯನ್ನು ಖಾತರಿಪಡಿಸುವ ಬಗ್ಗೆ ಕಾಳಜಿ ವಹಿಸುತ್ತದೆ ಮತ್ತು ಅವರಿಗೆ ಅಗತ್ಯವಿರುವ ತಕ್ಷಣದ ವೈದ್ಯಕೀಯ ಚಿಕಿತ್ಸೆ ಮತ್ತು ಆ ಉದ್ದೇಶಕ್ಕಾಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತಲುಪಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು” ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಮೂರ್ತಿ ಮುರಳೀಧರ್ ಅವರ ಔಪಚಾರಿಕ ನಿರ್ದೇಶನದ ನಂತರ “ಡಿಸಿಪಿ (ಪೂರ್ವ) ಅಲ್ ಹಿಂದ್ ಆಸ್ಪತ್ರೆಗೆ ತಲುಪಿ ಪೊಲೀಸರ ರಕ್ಷಣೆಯಲ್ಲಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದ್ದಾರೆ.

ಪೊಲೀಸರು “ಗಾಯಗೊಂಡ ಸಂತ್ರಸ್ತರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆಯನ್ನು ಒಳಗೊಂಡಂತೆ” ಅನುಸರಣೆಯ ಸ್ಥಿತಿ ವರದಿಯನ್ನು ಮಧ್ಯಾಹ್ನ 2: 15 ಕ್ಕೆ ನ್ಯಾಯಾಲಯದ ಮುಂದೆ ಇಡಬೇಕು ಮತ್ತು ತಕ್ಷಣವೇ ಈ ವಿಷಯವನ್ನು ಪೊಲೀಸ್ ಆಯುಕ್ತರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದಶಿಸಿದ್ದಾರೆ.

ಜನರಿಗೆ ಅಗತ್ಯ ಚಿಕಿತ್ಸೆ ಮತ್ತು ರಕ್ಷಣೆ ಒದಗಿಸಲು ಸಹ ನ್ಯಾಯಾಲಯ ಆದೇಶ ನೀಡಬೇಕು ಎಂಬುದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅತ್ಯಂತ ನಾಚಿಗೇಡಿನ ವಿಷಯ ಎಂದು ಡಾ.ಹರ್ಜಿತ್ ಸಿಂಗ್ ಎಂಬುವವರು ಟ್ವಿಟ್ಟರ್‌ನಲ್ಲಿ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...