Homeಮುಖಪುಟಚಿರಾಗ್ ಪಾಸ್ವಾನ್‌ಗೆ ಸಿಗದ ನಾಯಕ ಸ್ಥಾನ : ಸ್ಪೀಕರ್‌ ನಿರ್ಣಯಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ...

ಚಿರಾಗ್ ಪಾಸ್ವಾನ್‌ಗೆ ಸಿಗದ ನಾಯಕ ಸ್ಥಾನ : ಸ್ಪೀಕರ್‌ ನಿರ್ಣಯಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ದಿವಂಗತ ರಾಮ್‌ ವಿಲಾಸ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷದಲ್ಲಿನ ನಾಯಕತ್ವದ ಕಿತ್ತಾಟ ಸದ್ಯಕ್ಕೆ ಕೊನೆಯಾಗುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಪಶುಪತಿ ಪಾರಸ್‌ ಮತ್ತು ರಾಮ್‌ ವಿಲಾಸ್‌ ಪಾಸ್ವಾನ್ ಪುತ್ರ ಚಿರಾಗ್‌ ಪಾಸ್ವಾನ್ ನಡುವಿನ ಕಚ್ಚಾಟ ಈಗ ನ್ಯಾಯಾಲಯದ ಅಂಗಳಕ್ಕೆ ಕಾಲಿಟ್ಟಿದೆ. ದೆಹಲಿ ಹೈಕೋರ್ಟ್‌ನಲ್ಲಿ ಚಿರಾಗ್‌ ಪಾಸ್ವಾನ್‌ ಅವರಿಗೆ ಹಿನ್ನಡೆಯಾಗಿದ್ದು ಪಶುಪತಿ ಪಾರಸ್‌ ಅವರನ್ನು ಎಲ್‌ಜೆಪಿ ನಾಯಕ ಎಂಬ ಸ್ಪೀಕರ್‌ ತೀರ್ಮಾನವನ್ನು ಕೋರ್ಟ್‌ ಎತ್ತಿಹಿಡಿದಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪಶುಪತಿ ಪಾರಸ್‌ ಅವರನ್ನು ಎಲ್‌ಜೆಪಿ ನಾಯಕ ಎಂದು ಮಾನ್ಯ ಮಾಡಿದ್ದನ್ನು ಪ್ರಶ್ನಿಸಿ ರಾಮ್‌  ಚಿರಾಗ್‌ ಪಾಸ್ವಾನ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಚಿರಾಗ್‌ ಪಾಸ್ವಾನ್ ಅವರ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಸ್ಪೀಕರ್ ಓಂ ಬಿರ್ಲಾ ತೀರ್ಮಾನಕ್ಕೆ ತಡೆ ನೀಡಲು ನಿರಾಕರಿಸಿದೆ. ಆ ಮೂಲಕ ಎಲ್‌ಜೆಪಿ ಮುಖ್ಯಸ್ಥ ಪಟ್ಟಕ್ಕೆ ಏರುವ ಚಿರಾಗ್ ಪಾಸ್ವಾನ್ ಕನಸು ಭಗ್ನಗೊಂಡಿದೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ಪಶುಪತಿ ಪಾರಸ್‌ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಹೈಕೋರ್ಟ್ ಆದೇಶ ಮತ್ತು ಕೇಂದ್ರ ಮಂತ್ರಿ ಮಂಡಲದ ಪುನರ್ರಚನೆಯ ನಂತರ ಚಿರಾಗ್ ಪಾಸ್ವಾನ್‌ ಅವರಿಗೆ ತೀವ್ರ ಹಿನ್ನಡೆಯಾಗಿದ್ದು ಸಚಿವ ಪಶುಪತಿ ಪಾರಸ್‌ ಕೈ ಮೇಲಾಗಿದೆ.

ಇತ್ತೀಚೆಗಷ್ಟೆ ಪಶುಪತಿ ಪಾರಸ್‌ ಇತರ ನಾಲ್ಕು ಎಂಪಿಗಳೊಂದಿಗೆ ಚಿರಾಗ್ ಪಾಸ್ವಾನ್‌ ವಿರುದ್ಧ ಬಂಡಾಯವೆದ್ದಿದರು ಮತ್ತು ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿದ್ದರು.

ಸ್ಪೀಕರ್‌ ಓಂ ಬಿರ್ಲಾ ಪಶುಪತಿ ಪಾರಸ್‌ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕ ಎಂದು ಗುರಿತಿಸಿರುವುದನ್ನು ಪ್ರಶ್ನಿಸಿ ಎಲ್‌ಜೆಪಿ ಇಂದು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದೆ. ಪಾರಸ್‌ ಅವರನ್ನು ಕೇಂದ್ರ ಮಂತ್ರಿಮಂಡಳಕ್ಕೆ ಸೇರಿಸಿಕೊಂಡಿದ್ದನ್ನು ಪಕ್ಷ ಖಂಡಿಸುತ್ತದೆ ಎಂದು ಚಿರಾಗ್ ಪಾಸ್ವಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...