Homeಮುಖಪುಟಶಾಝಿಯಾ ಇಲ್ಮಿ ವಾಗ್ವಾದ ವಿಡಿಯೋ ಪೋಸ್ಟ್ ಮಾಡಿದವರ ಮಾಹಿತಿ ಕೊಡಿ: ಎಕ್ಸ್‌ಗೆ 36 ಗಂಟೆಗಳ ಕಾಲಾವಕಾಶ...

ಶಾಝಿಯಾ ಇಲ್ಮಿ ವಾಗ್ವಾದ ವಿಡಿಯೋ ಪೋಸ್ಟ್ ಮಾಡಿದವರ ಮಾಹಿತಿ ಕೊಡಿ: ಎಕ್ಸ್‌ಗೆ 36 ಗಂಟೆಗಳ ಕಾಲಾವಕಾಶ ನೀಡಿದ ಕೋರ್ಟ್‌

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಶಾಝಿಯಾ ಇಲ್ಮಿ ಮತ್ತು ಇಂಡಿಯಾ ಟುಡೇ ಪತ್ರಕರ್ತನ ನಡುವಿನ ವಾಗ್ವಾದದ ವಿಡಿಯೋ ಅಪ್ಲೋಡ್ ಮಾಡಿದ ಬಳಕೆದಾರರ ಮೂಲ ಚಂದಾದಾರರ ಮಾಹಿತಿಯನ್ನು (ಬಿಎಸ್‌ಐ) ಒದಗಿಸುವಂತೆ ನೀಡಿದ್ದ ನಿರ್ದೇಶನವನ್ನು ಮಾರ್ಪಡಿಸುವಂತೆ ಕೋರಿ ಎಕ್ಸ್ ಕಾರ್ಪ್ (ಟ್ವಿಟರ್) ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ (ಮೇ.8) ತಿರಸ್ಕರಿಸಿದೆ.

ಇಂಡಿಯಾ ಟುಡೇ ಪತ್ರಕರ್ತರ ಜೊತೆಗಿನ ಚರ್ಚೆಯಿಂದ ಇಲ್ಮಿ ಹಿಂದೆ ಸರಿದ ನಂತರ ರೆಕಾರ್ಡ್‌ ಮಾಡಲಾದ 18 ಸೆಕೆಂಡುಗಳ ಈ ವಿಡಿಯೋ ತುಣುಕನ್ನು ತೆಗೆದು ಹಾಕಲು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು.

ಏಪ್ರಿಲ್ 4ರ ಆದೇಶದಲ್ಲಿ, ಅಂತಹ ವಿಡಿಯೋ ರೆಕಾರ್ಡಿಂಗ್ ಇಲ್ಮಿಯ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿತ್ತು.

ನಂತರ, ಏಪ್ರಿಲ್ 9ರಂದು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಆ ವಿಡಿಯೋ ಕ್ಲಿಪ್ ಅನ್ನು ಅಪ್ಲೋಡ್ ಮಾಡಿದ್ದ ಎಕ್ಸ್‌ ಬಳಕೆದಾರರಿಗೆ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್‌ ನೀಡಿತ್ತು.

ಅಂತಹ ವ್ಯಕ್ತಿಗಳ ಬಿಎಸ್‌ಐ ವಿವರಗಳನ್ನು ಹಂಚಿಕೊಳ್ಳಲು ಎಕ್ಸ್‌ಗೆ ನಿರ್ದೇಶನ ನೀಡಿತ್ತು. ಬಿಎಸ್‌ಐ ವಿವರಗಳನ್ನು ಹಂಚಿಕೊಳ್ಳುವಂತೆ ನೀಡಿರುವ ನಿರ್ದೇಶನವನ್ನು ಮಾರ್ಪಡಿಸುವಂತೆ ಕೋರಿ ಎಕ್ಸ್ ಅರ್ಜಿ ಸಲ್ಲಿಸಿತ್ತು.

ಗುರುವಾರ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು ಈ ಅರ್ಜಿಯನ್ನು ತಿರಸ್ಕರಿಸಿದ್ದು, 36 ಗಂಟೆಗಳ ಒಳಗೆ ಬಿಎಸ್ಐ ವಿವರಗಳನ್ನು ಒದಗಿಸುವಂತೆ ಎಕ್ಸ್ ಕಾರ್ಪ್‌ಗೆ ಸೂಚನೆ ನೀಡಿದ್ದಾರೆ.

“ಏಪ್ರಿಲ್ 9ರ ಆದೇಶದ ಪ್ರಕಾರ ಅರ್ಜಿದಾರರು (ಎಕ್ಸ್ ಕಾರ್ಪ್) 36 ಗಂಟೆಗಳ ಒಳಗೆ ಬಿಎಸ್ಐ ವಿವರಗಳನ್ನು ಒದಗಿಸಬೇಕು. ಪೋಸ್ಟ್‌ಗಳನ್ನು ತೆಗೆದುಹಾಕುವ ನಿರ್ದೇಶನವನ್ನು ಈಗಾಗಲೇ ಪಾಲಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ವಿಡಿಯೋ ತೆಗೆದು ಹಾಕುವಂತೆ ಏಪ್ರಿಲ್ 4ರಂದು ನೀಡಿರುವ ಆದೇಶವನ್ನು ಎಕ್ಸ್‌ ಬಳಕೆದಾರರು ಪದೇ ಪದೇ ಉಲ್ಲಂಘಿಸುತ್ತಿರುವುದಕ್ಕೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.

“ವಿಡಿಯೋ ತೆಗೆದು ಹಾಕಬೇಕೆಂಬ ನ್ಯಾಯಾಲಯದ ತೀರ್ಪು ಮತ್ತು ವಿಡಿಯೋವನ್ನು ಜನರು ಒಟ್ಟಿಗೆ ಬಳಸುತ್ತಿರುವುದು ನ್ಯಾಯಾಂಗದ ಅಣಕ” ಎಂದು ಕೋರ್ಟ್ ಹೇಳಿದೆ.

ಎಕ್ಸ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ರಾಜಶೇಖರ್ ರಾವ್ ಅವರು, “ಬಳಕೆದಾರರ ಬಿಎಸ್ಐ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ನ್ಯಾಯಾಲಯ ಕೋರಿದ ಕೆಲವು ಮಾಹಿತಿಗಳು ಸಾರ್ವಜನಿಕ ವಲಯದಲ್ಲಿಯೂ ಇಲ್ಲ ಎಂದು ಅವರು ಹೇಳಿದ್ದಾರೆ. ಅಂತಹ ವಿವರಗಳನ್ನು ಮರೆಮಾಚಬೇಕೆಂದು ಅವರು ವಿನಂತಿಸಿದ್ದಾರೆ.

“ಎಕ್ಸ್ ಕಾರ್ಪ್ ಬಳಕೆದಾರರ ಗೌಪ್ಯತೆಗೆ ಸಂಬಂಧಿಸಿದಂತೆ ಮಾಡಿರುವ ಮನವಿಯನ್ನು ಸೂಕ್ತ ಪ್ರಕ್ರಿಯೆಗಳಲ್ಲಿ ನಿರ್ಧರಿಸಲು ಕಾಯ್ದಿರಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 29ಕ್ಕೆ ನಿಗದಿ ಮಾಡಿದೆ.

ಏನಿದು ಪ್ರಕರಣ?

ಈ ಪ್ರಕರಣವು, “ಕಾರ್ಗಿಲ್ ವಿಜಯ್ ದಿವಸದ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ” ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ 2025ರ ಏಪ್ರಿಲ್ 4 ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಇಲ್ಮಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...