Homeಮುಖಪುಟಶಾಝಿಯಾ ಇಲ್ಮಿ ವಾಗ್ವಾದ ವಿಡಿಯೋ ಪೋಸ್ಟ್ ಮಾಡಿದವರ ಮಾಹಿತಿ ಕೊಡಿ: ಎಕ್ಸ್‌ಗೆ 36 ಗಂಟೆಗಳ ಕಾಲಾವಕಾಶ...

ಶಾಝಿಯಾ ಇಲ್ಮಿ ವಾಗ್ವಾದ ವಿಡಿಯೋ ಪೋಸ್ಟ್ ಮಾಡಿದವರ ಮಾಹಿತಿ ಕೊಡಿ: ಎಕ್ಸ್‌ಗೆ 36 ಗಂಟೆಗಳ ಕಾಲಾವಕಾಶ ನೀಡಿದ ಕೋರ್ಟ್‌

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಶಾಝಿಯಾ ಇಲ್ಮಿ ಮತ್ತು ಇಂಡಿಯಾ ಟುಡೇ ಪತ್ರಕರ್ತನ ನಡುವಿನ ವಾಗ್ವಾದದ ವಿಡಿಯೋ ಅಪ್ಲೋಡ್ ಮಾಡಿದ ಬಳಕೆದಾರರ ಮೂಲ ಚಂದಾದಾರರ ಮಾಹಿತಿಯನ್ನು (ಬಿಎಸ್‌ಐ) ಒದಗಿಸುವಂತೆ ನೀಡಿದ್ದ ನಿರ್ದೇಶನವನ್ನು ಮಾರ್ಪಡಿಸುವಂತೆ ಕೋರಿ ಎಕ್ಸ್ ಕಾರ್ಪ್ (ಟ್ವಿಟರ್) ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ (ಮೇ.8) ತಿರಸ್ಕರಿಸಿದೆ.

ಇಂಡಿಯಾ ಟುಡೇ ಪತ್ರಕರ್ತರ ಜೊತೆಗಿನ ಚರ್ಚೆಯಿಂದ ಇಲ್ಮಿ ಹಿಂದೆ ಸರಿದ ನಂತರ ರೆಕಾರ್ಡ್‌ ಮಾಡಲಾದ 18 ಸೆಕೆಂಡುಗಳ ಈ ವಿಡಿಯೋ ತುಣುಕನ್ನು ತೆಗೆದು ಹಾಕಲು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು.

ಏಪ್ರಿಲ್ 4ರ ಆದೇಶದಲ್ಲಿ, ಅಂತಹ ವಿಡಿಯೋ ರೆಕಾರ್ಡಿಂಗ್ ಇಲ್ಮಿಯ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದಿತ್ತು.

ನಂತರ, ಏಪ್ರಿಲ್ 9ರಂದು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಆ ವಿಡಿಯೋ ಕ್ಲಿಪ್ ಅನ್ನು ಅಪ್ಲೋಡ್ ಮಾಡಿದ್ದ ಎಕ್ಸ್‌ ಬಳಕೆದಾರರಿಗೆ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್‌ ನೀಡಿತ್ತು.

ಅಂತಹ ವ್ಯಕ್ತಿಗಳ ಬಿಎಸ್‌ಐ ವಿವರಗಳನ್ನು ಹಂಚಿಕೊಳ್ಳಲು ಎಕ್ಸ್‌ಗೆ ನಿರ್ದೇಶನ ನೀಡಿತ್ತು. ಬಿಎಸ್‌ಐ ವಿವರಗಳನ್ನು ಹಂಚಿಕೊಳ್ಳುವಂತೆ ನೀಡಿರುವ ನಿರ್ದೇಶನವನ್ನು ಮಾರ್ಪಡಿಸುವಂತೆ ಕೋರಿ ಎಕ್ಸ್ ಅರ್ಜಿ ಸಲ್ಲಿಸಿತ್ತು.

ಗುರುವಾರ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು ಈ ಅರ್ಜಿಯನ್ನು ತಿರಸ್ಕರಿಸಿದ್ದು, 36 ಗಂಟೆಗಳ ಒಳಗೆ ಬಿಎಸ್ಐ ವಿವರಗಳನ್ನು ಒದಗಿಸುವಂತೆ ಎಕ್ಸ್ ಕಾರ್ಪ್‌ಗೆ ಸೂಚನೆ ನೀಡಿದ್ದಾರೆ.

“ಏಪ್ರಿಲ್ 9ರ ಆದೇಶದ ಪ್ರಕಾರ ಅರ್ಜಿದಾರರು (ಎಕ್ಸ್ ಕಾರ್ಪ್) 36 ಗಂಟೆಗಳ ಒಳಗೆ ಬಿಎಸ್ಐ ವಿವರಗಳನ್ನು ಒದಗಿಸಬೇಕು. ಪೋಸ್ಟ್‌ಗಳನ್ನು ತೆಗೆದುಹಾಕುವ ನಿರ್ದೇಶನವನ್ನು ಈಗಾಗಲೇ ಪಾಲಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ವಿಡಿಯೋ ತೆಗೆದು ಹಾಕುವಂತೆ ಏಪ್ರಿಲ್ 4ರಂದು ನೀಡಿರುವ ಆದೇಶವನ್ನು ಎಕ್ಸ್‌ ಬಳಕೆದಾರರು ಪದೇ ಪದೇ ಉಲ್ಲಂಘಿಸುತ್ತಿರುವುದಕ್ಕೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ.

“ವಿಡಿಯೋ ತೆಗೆದು ಹಾಕಬೇಕೆಂಬ ನ್ಯಾಯಾಲಯದ ತೀರ್ಪು ಮತ್ತು ವಿಡಿಯೋವನ್ನು ಜನರು ಒಟ್ಟಿಗೆ ಬಳಸುತ್ತಿರುವುದು ನ್ಯಾಯಾಂಗದ ಅಣಕ” ಎಂದು ಕೋರ್ಟ್ ಹೇಳಿದೆ.

ಎಕ್ಸ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ರಾಜಶೇಖರ್ ರಾವ್ ಅವರು, “ಬಳಕೆದಾರರ ಬಿಎಸ್ಐ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ನ್ಯಾಯಾಲಯ ಕೋರಿದ ಕೆಲವು ಮಾಹಿತಿಗಳು ಸಾರ್ವಜನಿಕ ವಲಯದಲ್ಲಿಯೂ ಇಲ್ಲ ಎಂದು ಅವರು ಹೇಳಿದ್ದಾರೆ. ಅಂತಹ ವಿವರಗಳನ್ನು ಮರೆಮಾಚಬೇಕೆಂದು ಅವರು ವಿನಂತಿಸಿದ್ದಾರೆ.

“ಎಕ್ಸ್ ಕಾರ್ಪ್ ಬಳಕೆದಾರರ ಗೌಪ್ಯತೆಗೆ ಸಂಬಂಧಿಸಿದಂತೆ ಮಾಡಿರುವ ಮನವಿಯನ್ನು ಸೂಕ್ತ ಪ್ರಕ್ರಿಯೆಗಳಲ್ಲಿ ನಿರ್ಧರಿಸಲು ಕಾಯ್ದಿರಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 29ಕ್ಕೆ ನಿಗದಿ ಮಾಡಿದೆ.

ಏನಿದು ಪ್ರಕರಣ?

ಈ ಪ್ರಕರಣವು, “ಕಾರ್ಗಿಲ್ ವಿಜಯ್ ದಿವಸದ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ” ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ 2025ರ ಏಪ್ರಿಲ್ 4 ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಇಲ್ಮಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...