Homeಮುಖಪುಟಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ನ್ನು ವಜಾ ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್ 

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ‘ಇಡಿ’ ಕಸ್ಟಡಿಯಲ್ಲಿರುವ ಕಾರಣ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಕಳೆದ ವಾರ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲಾಗಿತ್ತು. ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಪಿಐಎಲ್ ಸಲ್ಲಿಸಿದ್ದರು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಗುಪ್ತಾ ಅವರ ಅರ್ಜಿಯನ್ನು ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಪೀಠವು “ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ಹಿಡಿಯಲಿ” ಎಂದು ಹೇಳಿದೆ.

ಸಿಎಂ ಆಗಿ ಮುಂದುವರಿಯಬೇಕೆ ಅಥವಾ ಬೇಡ ಎಂಬುವುದು ಕೇಜ್ರಿವಾಲ್ ಅವರ ಆಯ್ಕೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರಿಗೆ ಪರಿಹಾರವು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ರಾಷ್ಟ್ರಪತಿಗಳ ಮುಂದೆ ಇರುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಈ ಕುರಿತು ಸಂಬಂಧಪಟ್ಟವರಿಗೆ ಸಂಪರ್ಕಿಸಲು ಅರ್ಜಿದಾರರಿಗೆ ನ್ಯಾಯಾಲಯ ಹೇಳಿದೆ.

ಪ್ರಸ್ತುತ, ಅಬಕಾರಿ ನೀತಿ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸಿಎಂ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಕೇಜ್ರಿವಾಲ್‌ಗೆ ಒಂಬತ್ತು ಸಮನ್ಸ್‌ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ, ನಂತರ ಜಾರಿ ನಿರ್ದೇಶನಾಲಯವು ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ಪಿಟಿಐ ಸುದ್ದಿ ಸಂಸ್ಥೆಯ ಪ್ರಕಾರ, ಕೇಜ್ರಿವಾಲ್ ಜೈಲಿನಲ್ಲಿ ದಿನದ ಹೆಚ್ಚಿನ ಸಮಯವನ್ನು ಪುಸ್ತಕಗಳನ್ನು ಓದಲು ಬಳಸುತ್ತಾರೆ. ಪ್ರತಿದಿನ ಎರಡು ಬಾರಿ ಯೋಗ ಮತ್ತು ಧ್ಯಾನ ಮಾಡುತ್ತಾರೆ. ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿ ಅಸ್ವಸ್ಥರಾಗಿದ್ದು, 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು. ಆದರೆ ಜೈಲು ಅಧಿಕಾರಿಗಳು ಇದನ್ನು ನಿರಾಕರಿಸಿದ್ದರು.

ಕೇಜ್ರಿವಾಲ್ ಅವರಿಗೆ ಟಿವಿಯನ್ನು ಒದಗಿಸಲಾಗಿದೆ, ಆದರೆ ಅವರು ದೂರದರ್ಶನವನ್ನು ವೀಕ್ಷಿಸಲು ಇಷ್ಟಪಡುವುದಿಲ್ಲ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಇವರಿಗೆ  ಟೇಬಲ್ ಮತ್ತು ಕುರ್ಚಿಯನ್ನು ಒದಗಿಸಲಾಗಿದೆ. ಅವರು ಚಹಾ ಮತ್ತು ಮನೆಯಲ್ಲಿ ತಯಾರಿಸಿದ ಆಹಾರವನ್ನು ನಿಯಮಿತವಾಗಿ ಸೇವಿಸುತ್ತಾರೆ ಎಂದು ಪಿಟಿಐ ವರದಿ ಉಲ್ಲೇಖಿಸಿದೆ.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...