ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ನಾಯಕರ ವಿರುದ್ಧ FIR ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.
ಬಿಜೆಪಿ ನಾಯಕರಾದ ಕಪಿಲ್ ಮಿಶ್ರ, ಅನುರಾಗ್ ಠಾಕೂರ್, ಪರ್ವೇಶ್ ವರ್ಮ ಹಾಗು ಅಭಯ್ ವರ್ಮ ವಿರುದ್ಧ FIR ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದ್ದಲ್ಲದೆ ಕೇಸು ದಾಖಲಿಸಲು ವಿಳಂಬ ಮಾಡಿದ್ದಕ್ಕೆ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು.
ಬಿಜೆಪಿ ಮುಖಂಡರ ದ್ವೇಷ ಭಾಷಣದ ವೀಡಿಯೋ ನೋಡಿಲ್ಲವೆಂದ ಪೊಲೀಸರಿಗೆ ಛೀಮಾರಿ ಹಾಕಿದ ಕೋರ್ಟ್, ಅಲ್ಲಿಯೇ ವಿಡಿಯೋಗಳನ್ನು ಬಿತ್ತರಿಸಿ, ಪೂರ್ಣ ವಿಡಿಯೋಗಳನ್ನು ನೋಡಿ FIR ದಾಖಲಿಸಿ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ. ಗುರುವಾರ ಮಾಹಿತಿ ನೀಡುವಂತೆ ಕಮೀಷನರ್ ಗೆ ಆದೇಶಿಸಿದೆ.
ಕಳೆದ ಮೂರು ದಿನದಿಂದ ಈಶಾನ್ಯ ದೆಹಲಿಯಲ್ಲಿ ಗಲಭೆ ಪ್ರಾರಂಭವಾಗಿದ್ದು. ಗಲಭೆಯಲ್ಲಿ ಈವರೆಗೆ 23 ಜನ ಸಾವಿಗೀಡಾಗಿದ್ದಾರೆ ಹಾಗೂ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಲಭೆಗೂ ಮೊದಲು ಬಿಜಿಪಿ ನಾಯಕ ಕಪಿಲ್ ಮಿಶ್ರ ಉದ್ರೇಕಕಾರಿಯಾಗಿ ಭಾಷಣ ಮಾಡಿದ್ದರು. ಇದರ ನಂತರ ಅಲ್ಲಿ ಗಲಭೆ ಪ್ರಾರಂಭವಾಗಿತ್ತು.