Homeಮುಖಪುಟಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

ಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

- Advertisement -
- Advertisement -

ಹಮ್ದರ್ದ್ ಕಂಪನಿಯನ್ನು ಗುರಿಯಾಗಿಸಿ ಮತ್ತೊಂದು ಕೋಮುದ್ವೇಷದ ವಿಡಿಯೋ ಹರಿಬಿಟ್ಟ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮ್‌ದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ಗುರುವಾರ(ಮೇ.1) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪತಂಜಲಿ ಸಂಸ್ಥೆಯ ಹೊಸ ಉತ್ಪವನ್ನು ಪರಿಚಯಿಸುವಾಗ ಹಮ್ದರ್ದ್ ಕಂಪನಿಯ ಪ್ರಸಿದ್ದ ಪಾನಿಯಾ ರೂಮ್‌ ಅಫ್ಝಾವನ್ನು ಗುರಿಯಾಗಿಸಿ ಕೋಮುದ್ವೇಷದ ಹೇಳಿಕೆ ನೀಡಿದ ರಾಮ್‌ದೇವ್ ಅವರಿಗೆ ಹೈಕೋರ್ಟ್ ಕಳೆದವಾರ ಛೀಮಾರಿ ಹಾಕಿತ್ತು. ರಾಮ್‌ದೇವ್ ಹೇಳಿಕೆ ‘ಆಫಾತಕಾರಿ’ ಎಂದಿತ್ತು.

ಈ ವೇಳೆ ತಾನು ವಿಡಿಯೋವನ್ನು ತೆಗೆಯುವುದಾಗಿ ಹೇಳಿದ್ದ ರಾಮ್‌ದೇವ್, ಇನ್ನು ಮುಂದೆ ಇಂತಹ ಕೋಮುದ್ವೇಷದ, ವಿಶೇಷವಾಗಿ ಹಮ್ದರ್ದ್ ಕುರಿತು ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದರು.

ಆದರೆ, ಇಂದು ಪ್ರಕರಣದ ವಿಚಾರಣೆ ವೇಳೆ, ರಾಮ್‌ದೇವ್ ಹಮ್ದರ್ದ್ ಕುರಿತು ಮತ್ತೊಂದು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ರಾಮದೇವ್ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, ಅವರು,ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಅವರು ಯಾರ ನಿಯಂತ್ರಣಕ್ಕೂ ಸಿಗದೆ, ತನ್ನದೇ ಲೋಕದಲ್ಲಿ ಬದುಕುತ್ತಿದ್ದಾರೆ” ಎಂದು ರಾಮ್‌ದೇವ್ ವಿರುದ್ದ ನ್ಯಾಯಮೂರ್ತಿ ಕಿಡಿಕಾರಿದ್ದಾರೆ.

ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ರಾಮ್‌ದೇವ್ ಪರ ವಕೀಲರು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ 24 ಗಂಟೆಗಳ ಒಳಗೆ ಇತ್ತೀಚಿನ ವಿಡಿಯೋದ ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಂದು ವಾರದೊಳಗೆ ಆದೇಶ ಅನುಸರಣೆಯ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ. ಹಿಂದಿನ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರ ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ರಾಮ್‌ದೇವ್ ಅವರ ಕೋಮುದ್ವೇಷದ ವಿಡಿಯೋ ವಿರುದ್ಧ ಹಮ್ದರ್ದ್ ಕಂಪನಿ ನ್ಯಾಯಾಲಯ ಮೆಟ್ಟಿಲೇರಿತ್ತು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ರಾಮದೇವ್ ಕೋಮುದ್ವೇಷದ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೊದಲ ವಿಡಿಯೋ ಮತ್ತು ಈಗ ಬಿಟ್ಟಿರುವ ವಿಡಿಯೋ ಎರಡರಲ್ಲೂ ರಾಮ್‌ದೇವ್ ಅವರು ಹಮ್ದರ್ದ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ. ಎರಡರಲ್ಲೂ ಹಮ್ದರ್ದ್‌ ಹಣವನ್ನು ಮಸೀದಿ, ಮದ್ರಸಕ್ಕೆ ನಿರ್ಮಾಣಕ್ಕೆ ಬಳಸುತ್ತದೆ ಎಂದಿದ್ದಾರೆ. ಎರಡೂ ವಿಡಿಯೋಗಳಲ್ಲಿ ಹಮ್ದರ್ದ್‌ ನಿರ್ದಿಷ್ಟ ಸಮುದಾಯಕ್ಕೆ ಸೇರಿದ್ದು ಮತ್ತು ಅದು ಆ ಸಮುದಾಯದ ಹಿತಾಸಕ್ತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ವಕೀಲ ಸೇಥಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ರಾಮದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಇತ್ತೀಚಿನ ವಿಡಿಯೋದಲ್ಲಿ ಹಮ್ದರ್ದ್ ಉತ್ಪನ್ನವನ್ನು ಅವಹೇಳನ ಮಾಡಿಲ್ಲ ಮತ್ತು ಹಿಂದಿನ ವಿಡಿಯೋವನ್ನು ತೆಗೆದುಹಾಕುವ ಆದೇಶವನ್ನು ಈಗಾಗಲೇ ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮದೇವ್ ಸಲ್ಲಿಸಿದ ಅಫಿಡವಿಟ್‌ನ ವಿಷಯಗಳ ಕಡೆಗೆ ನ್ಯಾಯಾಲಯದ ಗಮನ ಸೆಳೆಯಲು ನಾಯರ್ ಪ್ರಯತ್ನಿಸಿದ್ದಾರೆ.

“ಅಫಿಡವಿಟ್‌ನಲ್ಲಿ ಪ್ಯಾರಾ 3 ಮುಖ್ಯವಾಗಿದೆ, ಅಲ್ಲಿ ಅವರು “ನಾನು ಧರ್ಮಗಳ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ” ಎಂಬುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, “ನಮಗೆ ಅವರ ರಾಜಕೀಯ ದೃಷ್ಟಿಕೋನದ ಬಗ್ಗೆ ತಿಳಿಯಬೇಕಾಗಿಲ್ಲ. ನನಗೆ ಈ ಮೊಕದ್ದಮೆಯ ಬಗ್ಗೆ ಮಾತ್ರ ತಿಳಿಯಬೇಕಿದೆ. ಅವರು ಅವರ (ಹಮ್ದರ್ದ್‌) ಹೆಸರು ಉತ್ಪನ್ನಗಳ ಬಗ್ಗೆ ಉಲ್ಲೇಖಿಸದಂತೆ ತಡೆಯುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ರಾಮದೇವ್ ಅವರ ಇತ್ತೀಚಿನ ವಿಡಿಯೋವನ್ನೂ ತೆಗೆದುಹಾಕಲಾಗುವುದು ಎಂದು ಅವರ ಪರ ವಕೀಲರು ತಿಳಿಸಿದ ಕಾರಣ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ನೀಡಿಲ್ಲ ಎಂದು ವರದಿಯಾಗಿದೆ.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...