Homeಮುಖಪುಟಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

ಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

- Advertisement -
- Advertisement -

ಹಮ್ದರ್ದ್ ಕಂಪನಿಯನ್ನು ಗುರಿಯಾಗಿಸಿ ಮತ್ತೊಂದು ಕೋಮುದ್ವೇಷದ ವಿಡಿಯೋ ಹರಿಬಿಟ್ಟ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮ್‌ದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ಗುರುವಾರ(ಮೇ.1) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪತಂಜಲಿ ಸಂಸ್ಥೆಯ ಹೊಸ ಉತ್ಪವನ್ನು ಪರಿಚಯಿಸುವಾಗ ಹಮ್ದರ್ದ್ ಕಂಪನಿಯ ಪ್ರಸಿದ್ದ ಪಾನಿಯಾ ರೂಮ್‌ ಅಫ್ಝಾವನ್ನು ಗುರಿಯಾಗಿಸಿ ಕೋಮುದ್ವೇಷದ ಹೇಳಿಕೆ ನೀಡಿದ ರಾಮ್‌ದೇವ್ ಅವರಿಗೆ ಹೈಕೋರ್ಟ್ ಕಳೆದವಾರ ಛೀಮಾರಿ ಹಾಕಿತ್ತು. ರಾಮ್‌ದೇವ್ ಹೇಳಿಕೆ ‘ಆಫಾತಕಾರಿ’ ಎಂದಿತ್ತು.

ಈ ವೇಳೆ ತಾನು ವಿಡಿಯೋವನ್ನು ತೆಗೆಯುವುದಾಗಿ ಹೇಳಿದ್ದ ರಾಮ್‌ದೇವ್, ಇನ್ನು ಮುಂದೆ ಇಂತಹ ಕೋಮುದ್ವೇಷದ, ವಿಶೇಷವಾಗಿ ಹಮ್ದರ್ದ್ ಕುರಿತು ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದರು.

ಆದರೆ, ಇಂದು ಪ್ರಕರಣದ ವಿಚಾರಣೆ ವೇಳೆ, ರಾಮ್‌ದೇವ್ ಹಮ್ದರ್ದ್ ಕುರಿತು ಮತ್ತೊಂದು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ರಾಮದೇವ್ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, ಅವರು,ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಅವರು ಯಾರ ನಿಯಂತ್ರಣಕ್ಕೂ ಸಿಗದೆ, ತನ್ನದೇ ಲೋಕದಲ್ಲಿ ಬದುಕುತ್ತಿದ್ದಾರೆ” ಎಂದು ರಾಮ್‌ದೇವ್ ವಿರುದ್ದ ನ್ಯಾಯಮೂರ್ತಿ ಕಿಡಿಕಾರಿದ್ದಾರೆ.

ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ರಾಮ್‌ದೇವ್ ಪರ ವಕೀಲರು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ 24 ಗಂಟೆಗಳ ಒಳಗೆ ಇತ್ತೀಚಿನ ವಿಡಿಯೋದ ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಂದು ವಾರದೊಳಗೆ ಆದೇಶ ಅನುಸರಣೆಯ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ. ಹಿಂದಿನ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರ ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ರಾಮ್‌ದೇವ್ ಅವರ ಕೋಮುದ್ವೇಷದ ವಿಡಿಯೋ ವಿರುದ್ಧ ಹಮ್ದರ್ದ್ ಕಂಪನಿ ನ್ಯಾಯಾಲಯ ಮೆಟ್ಟಿಲೇರಿತ್ತು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ರಾಮದೇವ್ ಕೋಮುದ್ವೇಷದ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೊದಲ ವಿಡಿಯೋ ಮತ್ತು ಈಗ ಬಿಟ್ಟಿರುವ ವಿಡಿಯೋ ಎರಡರಲ್ಲೂ ರಾಮ್‌ದೇವ್ ಅವರು ಹಮ್ದರ್ದ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ. ಎರಡರಲ್ಲೂ ಹಮ್ದರ್ದ್‌ ಹಣವನ್ನು ಮಸೀದಿ, ಮದ್ರಸಕ್ಕೆ ನಿರ್ಮಾಣಕ್ಕೆ ಬಳಸುತ್ತದೆ ಎಂದಿದ್ದಾರೆ. ಎರಡೂ ವಿಡಿಯೋಗಳಲ್ಲಿ ಹಮ್ದರ್ದ್‌ ನಿರ್ದಿಷ್ಟ ಸಮುದಾಯಕ್ಕೆ ಸೇರಿದ್ದು ಮತ್ತು ಅದು ಆ ಸಮುದಾಯದ ಹಿತಾಸಕ್ತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ವಕೀಲ ಸೇಥಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ರಾಮದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಇತ್ತೀಚಿನ ವಿಡಿಯೋದಲ್ಲಿ ಹಮ್ದರ್ದ್ ಉತ್ಪನ್ನವನ್ನು ಅವಹೇಳನ ಮಾಡಿಲ್ಲ ಮತ್ತು ಹಿಂದಿನ ವಿಡಿಯೋವನ್ನು ತೆಗೆದುಹಾಕುವ ಆದೇಶವನ್ನು ಈಗಾಗಲೇ ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮದೇವ್ ಸಲ್ಲಿಸಿದ ಅಫಿಡವಿಟ್‌ನ ವಿಷಯಗಳ ಕಡೆಗೆ ನ್ಯಾಯಾಲಯದ ಗಮನ ಸೆಳೆಯಲು ನಾಯರ್ ಪ್ರಯತ್ನಿಸಿದ್ದಾರೆ.

“ಅಫಿಡವಿಟ್‌ನಲ್ಲಿ ಪ್ಯಾರಾ 3 ಮುಖ್ಯವಾಗಿದೆ, ಅಲ್ಲಿ ಅವರು “ನಾನು ಧರ್ಮಗಳ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ” ಎಂಬುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, “ನಮಗೆ ಅವರ ರಾಜಕೀಯ ದೃಷ್ಟಿಕೋನದ ಬಗ್ಗೆ ತಿಳಿಯಬೇಕಾಗಿಲ್ಲ. ನನಗೆ ಈ ಮೊಕದ್ದಮೆಯ ಬಗ್ಗೆ ಮಾತ್ರ ತಿಳಿಯಬೇಕಿದೆ. ಅವರು ಅವರ (ಹಮ್ದರ್ದ್‌) ಹೆಸರು ಉತ್ಪನ್ನಗಳ ಬಗ್ಗೆ ಉಲ್ಲೇಖಿಸದಂತೆ ತಡೆಯುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ರಾಮದೇವ್ ಅವರ ಇತ್ತೀಚಿನ ವಿಡಿಯೋವನ್ನೂ ತೆಗೆದುಹಾಕಲಾಗುವುದು ಎಂದು ಅವರ ಪರ ವಕೀಲರು ತಿಳಿಸಿದ ಕಾರಣ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ನೀಡಿಲ್ಲ ಎಂದು ವರದಿಯಾಗಿದೆ.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...