Homeಮುಖಪುಟಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

ಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

- Advertisement -
- Advertisement -

ಹಮ್ದರ್ದ್ ಕಂಪನಿಯನ್ನು ಗುರಿಯಾಗಿಸಿ ಮತ್ತೊಂದು ಕೋಮುದ್ವೇಷದ ವಿಡಿಯೋ ಹರಿಬಿಟ್ಟ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮ್‌ದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ಗುರುವಾರ(ಮೇ.1) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪತಂಜಲಿ ಸಂಸ್ಥೆಯ ಹೊಸ ಉತ್ಪವನ್ನು ಪರಿಚಯಿಸುವಾಗ ಹಮ್ದರ್ದ್ ಕಂಪನಿಯ ಪ್ರಸಿದ್ದ ಪಾನಿಯಾ ರೂಮ್‌ ಅಫ್ಝಾವನ್ನು ಗುರಿಯಾಗಿಸಿ ಕೋಮುದ್ವೇಷದ ಹೇಳಿಕೆ ನೀಡಿದ ರಾಮ್‌ದೇವ್ ಅವರಿಗೆ ಹೈಕೋರ್ಟ್ ಕಳೆದವಾರ ಛೀಮಾರಿ ಹಾಕಿತ್ತು. ರಾಮ್‌ದೇವ್ ಹೇಳಿಕೆ ‘ಆಫಾತಕಾರಿ’ ಎಂದಿತ್ತು.

ಈ ವೇಳೆ ತಾನು ವಿಡಿಯೋವನ್ನು ತೆಗೆಯುವುದಾಗಿ ಹೇಳಿದ್ದ ರಾಮ್‌ದೇವ್, ಇನ್ನು ಮುಂದೆ ಇಂತಹ ಕೋಮುದ್ವೇಷದ, ವಿಶೇಷವಾಗಿ ಹಮ್ದರ್ದ್ ಕುರಿತು ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದರು.

ಆದರೆ, ಇಂದು ಪ್ರಕರಣದ ವಿಚಾರಣೆ ವೇಳೆ, ರಾಮ್‌ದೇವ್ ಹಮ್ದರ್ದ್ ಕುರಿತು ಮತ್ತೊಂದು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ರಾಮದೇವ್ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, ಅವರು,ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಅವರು ಯಾರ ನಿಯಂತ್ರಣಕ್ಕೂ ಸಿಗದೆ, ತನ್ನದೇ ಲೋಕದಲ್ಲಿ ಬದುಕುತ್ತಿದ್ದಾರೆ” ಎಂದು ರಾಮ್‌ದೇವ್ ವಿರುದ್ದ ನ್ಯಾಯಮೂರ್ತಿ ಕಿಡಿಕಾರಿದ್ದಾರೆ.

ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ರಾಮ್‌ದೇವ್ ಪರ ವಕೀಲರು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ 24 ಗಂಟೆಗಳ ಒಳಗೆ ಇತ್ತೀಚಿನ ವಿಡಿಯೋದ ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಂದು ವಾರದೊಳಗೆ ಆದೇಶ ಅನುಸರಣೆಯ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ. ಹಿಂದಿನ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರ ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ರಾಮ್‌ದೇವ್ ಅವರ ಕೋಮುದ್ವೇಷದ ವಿಡಿಯೋ ವಿರುದ್ಧ ಹಮ್ದರ್ದ್ ಕಂಪನಿ ನ್ಯಾಯಾಲಯ ಮೆಟ್ಟಿಲೇರಿತ್ತು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ರಾಮದೇವ್ ಕೋಮುದ್ವೇಷದ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೊದಲ ವಿಡಿಯೋ ಮತ್ತು ಈಗ ಬಿಟ್ಟಿರುವ ವಿಡಿಯೋ ಎರಡರಲ್ಲೂ ರಾಮ್‌ದೇವ್ ಅವರು ಹಮ್ದರ್ದ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ. ಎರಡರಲ್ಲೂ ಹಮ್ದರ್ದ್‌ ಹಣವನ್ನು ಮಸೀದಿ, ಮದ್ರಸಕ್ಕೆ ನಿರ್ಮಾಣಕ್ಕೆ ಬಳಸುತ್ತದೆ ಎಂದಿದ್ದಾರೆ. ಎರಡೂ ವಿಡಿಯೋಗಳಲ್ಲಿ ಹಮ್ದರ್ದ್‌ ನಿರ್ದಿಷ್ಟ ಸಮುದಾಯಕ್ಕೆ ಸೇರಿದ್ದು ಮತ್ತು ಅದು ಆ ಸಮುದಾಯದ ಹಿತಾಸಕ್ತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ವಕೀಲ ಸೇಥಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ರಾಮದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಇತ್ತೀಚಿನ ವಿಡಿಯೋದಲ್ಲಿ ಹಮ್ದರ್ದ್ ಉತ್ಪನ್ನವನ್ನು ಅವಹೇಳನ ಮಾಡಿಲ್ಲ ಮತ್ತು ಹಿಂದಿನ ವಿಡಿಯೋವನ್ನು ತೆಗೆದುಹಾಕುವ ಆದೇಶವನ್ನು ಈಗಾಗಲೇ ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮದೇವ್ ಸಲ್ಲಿಸಿದ ಅಫಿಡವಿಟ್‌ನ ವಿಷಯಗಳ ಕಡೆಗೆ ನ್ಯಾಯಾಲಯದ ಗಮನ ಸೆಳೆಯಲು ನಾಯರ್ ಪ್ರಯತ್ನಿಸಿದ್ದಾರೆ.

“ಅಫಿಡವಿಟ್‌ನಲ್ಲಿ ಪ್ಯಾರಾ 3 ಮುಖ್ಯವಾಗಿದೆ, ಅಲ್ಲಿ ಅವರು “ನಾನು ಧರ್ಮಗಳ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ” ಎಂಬುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, “ನಮಗೆ ಅವರ ರಾಜಕೀಯ ದೃಷ್ಟಿಕೋನದ ಬಗ್ಗೆ ತಿಳಿಯಬೇಕಾಗಿಲ್ಲ. ನನಗೆ ಈ ಮೊಕದ್ದಮೆಯ ಬಗ್ಗೆ ಮಾತ್ರ ತಿಳಿಯಬೇಕಿದೆ. ಅವರು ಅವರ (ಹಮ್ದರ್ದ್‌) ಹೆಸರು ಉತ್ಪನ್ನಗಳ ಬಗ್ಗೆ ಉಲ್ಲೇಖಿಸದಂತೆ ತಡೆಯುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ರಾಮದೇವ್ ಅವರ ಇತ್ತೀಚಿನ ವಿಡಿಯೋವನ್ನೂ ತೆಗೆದುಹಾಕಲಾಗುವುದು ಎಂದು ಅವರ ಪರ ವಕೀಲರು ತಿಳಿಸಿದ ಕಾರಣ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ನೀಡಿಲ್ಲ ಎಂದು ವರದಿಯಾಗಿದೆ.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...