Homeಮುಖಪುಟಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

ಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

- Advertisement -
- Advertisement -

ಹಮ್ದರ್ದ್ ಕಂಪನಿಯನ್ನು ಗುರಿಯಾಗಿಸಿ ಮತ್ತೊಂದು ಕೋಮುದ್ವೇಷದ ವಿಡಿಯೋ ಹರಿಬಿಟ್ಟ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮ್‌ದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ಗುರುವಾರ(ಮೇ.1) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪತಂಜಲಿ ಸಂಸ್ಥೆಯ ಹೊಸ ಉತ್ಪವನ್ನು ಪರಿಚಯಿಸುವಾಗ ಹಮ್ದರ್ದ್ ಕಂಪನಿಯ ಪ್ರಸಿದ್ದ ಪಾನಿಯಾ ರೂಮ್‌ ಅಫ್ಝಾವನ್ನು ಗುರಿಯಾಗಿಸಿ ಕೋಮುದ್ವೇಷದ ಹೇಳಿಕೆ ನೀಡಿದ ರಾಮ್‌ದೇವ್ ಅವರಿಗೆ ಹೈಕೋರ್ಟ್ ಕಳೆದವಾರ ಛೀಮಾರಿ ಹಾಕಿತ್ತು. ರಾಮ್‌ದೇವ್ ಹೇಳಿಕೆ ‘ಆಫಾತಕಾರಿ’ ಎಂದಿತ್ತು.

ಈ ವೇಳೆ ತಾನು ವಿಡಿಯೋವನ್ನು ತೆಗೆಯುವುದಾಗಿ ಹೇಳಿದ್ದ ರಾಮ್‌ದೇವ್, ಇನ್ನು ಮುಂದೆ ಇಂತಹ ಕೋಮುದ್ವೇಷದ, ವಿಶೇಷವಾಗಿ ಹಮ್ದರ್ದ್ ಕುರಿತು ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದರು.

ಆದರೆ, ಇಂದು ಪ್ರಕರಣದ ವಿಚಾರಣೆ ವೇಳೆ, ರಾಮ್‌ದೇವ್ ಹಮ್ದರ್ದ್ ಕುರಿತು ಮತ್ತೊಂದು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ರಾಮದೇವ್ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, ಅವರು,ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಅವರು ಯಾರ ನಿಯಂತ್ರಣಕ್ಕೂ ಸಿಗದೆ, ತನ್ನದೇ ಲೋಕದಲ್ಲಿ ಬದುಕುತ್ತಿದ್ದಾರೆ” ಎಂದು ರಾಮ್‌ದೇವ್ ವಿರುದ್ದ ನ್ಯಾಯಮೂರ್ತಿ ಕಿಡಿಕಾರಿದ್ದಾರೆ.

ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ರಾಮ್‌ದೇವ್ ಪರ ವಕೀಲರು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ 24 ಗಂಟೆಗಳ ಒಳಗೆ ಇತ್ತೀಚಿನ ವಿಡಿಯೋದ ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಂದು ವಾರದೊಳಗೆ ಆದೇಶ ಅನುಸರಣೆಯ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ. ಹಿಂದಿನ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರ ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ರಾಮ್‌ದೇವ್ ಅವರ ಕೋಮುದ್ವೇಷದ ವಿಡಿಯೋ ವಿರುದ್ಧ ಹಮ್ದರ್ದ್ ಕಂಪನಿ ನ್ಯಾಯಾಲಯ ಮೆಟ್ಟಿಲೇರಿತ್ತು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ರಾಮದೇವ್ ಕೋಮುದ್ವೇಷದ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೊದಲ ವಿಡಿಯೋ ಮತ್ತು ಈಗ ಬಿಟ್ಟಿರುವ ವಿಡಿಯೋ ಎರಡರಲ್ಲೂ ರಾಮ್‌ದೇವ್ ಅವರು ಹಮ್ದರ್ದ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ. ಎರಡರಲ್ಲೂ ಹಮ್ದರ್ದ್‌ ಹಣವನ್ನು ಮಸೀದಿ, ಮದ್ರಸಕ್ಕೆ ನಿರ್ಮಾಣಕ್ಕೆ ಬಳಸುತ್ತದೆ ಎಂದಿದ್ದಾರೆ. ಎರಡೂ ವಿಡಿಯೋಗಳಲ್ಲಿ ಹಮ್ದರ್ದ್‌ ನಿರ್ದಿಷ್ಟ ಸಮುದಾಯಕ್ಕೆ ಸೇರಿದ್ದು ಮತ್ತು ಅದು ಆ ಸಮುದಾಯದ ಹಿತಾಸಕ್ತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ವಕೀಲ ಸೇಥಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ರಾಮದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಇತ್ತೀಚಿನ ವಿಡಿಯೋದಲ್ಲಿ ಹಮ್ದರ್ದ್ ಉತ್ಪನ್ನವನ್ನು ಅವಹೇಳನ ಮಾಡಿಲ್ಲ ಮತ್ತು ಹಿಂದಿನ ವಿಡಿಯೋವನ್ನು ತೆಗೆದುಹಾಕುವ ಆದೇಶವನ್ನು ಈಗಾಗಲೇ ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮದೇವ್ ಸಲ್ಲಿಸಿದ ಅಫಿಡವಿಟ್‌ನ ವಿಷಯಗಳ ಕಡೆಗೆ ನ್ಯಾಯಾಲಯದ ಗಮನ ಸೆಳೆಯಲು ನಾಯರ್ ಪ್ರಯತ್ನಿಸಿದ್ದಾರೆ.

“ಅಫಿಡವಿಟ್‌ನಲ್ಲಿ ಪ್ಯಾರಾ 3 ಮುಖ್ಯವಾಗಿದೆ, ಅಲ್ಲಿ ಅವರು “ನಾನು ಧರ್ಮಗಳ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ” ಎಂಬುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, “ನಮಗೆ ಅವರ ರಾಜಕೀಯ ದೃಷ್ಟಿಕೋನದ ಬಗ್ಗೆ ತಿಳಿಯಬೇಕಾಗಿಲ್ಲ. ನನಗೆ ಈ ಮೊಕದ್ದಮೆಯ ಬಗ್ಗೆ ಮಾತ್ರ ತಿಳಿಯಬೇಕಿದೆ. ಅವರು ಅವರ (ಹಮ್ದರ್ದ್‌) ಹೆಸರು ಉತ್ಪನ್ನಗಳ ಬಗ್ಗೆ ಉಲ್ಲೇಖಿಸದಂತೆ ತಡೆಯುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ರಾಮದೇವ್ ಅವರ ಇತ್ತೀಚಿನ ವಿಡಿಯೋವನ್ನೂ ತೆಗೆದುಹಾಕಲಾಗುವುದು ಎಂದು ಅವರ ಪರ ವಕೀಲರು ತಿಳಿಸಿದ ಕಾರಣ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ನೀಡಿಲ್ಲ ಎಂದು ವರದಿಯಾಗಿದೆ.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...