Homeಮುಖಪುಟಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

ಹಮ್ದರ್ದ್‌ ಕುರಿತು ಮತ್ತೊಂದು ಕೋಮುದ್ವೇಷದ ವಿಡಿಯೋ: ಪತಂಜಲಿಯ ರಾಮ್‌ದೇವ್‌ಗೆ ಕೋರ್ಟ್ ತಪರಾಕಿ

- Advertisement -
- Advertisement -

ಹಮ್ದರ್ದ್ ಕಂಪನಿಯನ್ನು ಗುರಿಯಾಗಿಸಿ ಮತ್ತೊಂದು ಕೋಮುದ್ವೇಷದ ವಿಡಿಯೋ ಹರಿಬಿಟ್ಟ ಪತಂಜಲಿ ಸಂಸ್ಥೆಯ ಸಹ ಸಂಸ್ಥಾಪಕ ರಾಮ್‌ದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ಗುರುವಾರ(ಮೇ.1) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪತಂಜಲಿ ಸಂಸ್ಥೆಯ ಹೊಸ ಉತ್ಪವನ್ನು ಪರಿಚಯಿಸುವಾಗ ಹಮ್ದರ್ದ್ ಕಂಪನಿಯ ಪ್ರಸಿದ್ದ ಪಾನಿಯಾ ರೂಮ್‌ ಅಫ್ಝಾವನ್ನು ಗುರಿಯಾಗಿಸಿ ಕೋಮುದ್ವೇಷದ ಹೇಳಿಕೆ ನೀಡಿದ ರಾಮ್‌ದೇವ್ ಅವರಿಗೆ ಹೈಕೋರ್ಟ್ ಕಳೆದವಾರ ಛೀಮಾರಿ ಹಾಕಿತ್ತು. ರಾಮ್‌ದೇವ್ ಹೇಳಿಕೆ ‘ಆಫಾತಕಾರಿ’ ಎಂದಿತ್ತು.

ಈ ವೇಳೆ ತಾನು ವಿಡಿಯೋವನ್ನು ತೆಗೆಯುವುದಾಗಿ ಹೇಳಿದ್ದ ರಾಮ್‌ದೇವ್, ಇನ್ನು ಮುಂದೆ ಇಂತಹ ಕೋಮುದ್ವೇಷದ, ವಿಶೇಷವಾಗಿ ಹಮ್ದರ್ದ್ ಕುರಿತು ಹೇಳಿಕೆ ನೀಡುವುದಿಲ್ಲ ಎಂದು ನ್ಯಾಯಾಲಯದ ಮುಂದೆ ಹೇಳಿದ್ದರು.

ಆದರೆ, ಇಂದು ಪ್ರಕರಣದ ವಿಚಾರಣೆ ವೇಳೆ, ರಾಮ್‌ದೇವ್ ಹಮ್ದರ್ದ್ ಕುರಿತು ಮತ್ತೊಂದು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತರಲಾಗಿದೆ.

ರಾಮದೇವ್ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, ಅವರು,ರಾಮ್‌ದೇವ್ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ನೀಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಅವರು ಯಾರ ನಿಯಂತ್ರಣಕ್ಕೂ ಸಿಗದೆ, ತನ್ನದೇ ಲೋಕದಲ್ಲಿ ಬದುಕುತ್ತಿದ್ದಾರೆ” ಎಂದು ರಾಮ್‌ದೇವ್ ವಿರುದ್ದ ನ್ಯಾಯಮೂರ್ತಿ ಕಿಡಿಕಾರಿದ್ದಾರೆ.

ನ್ಯಾಯಾಲಯ ತರಾಟೆಗೆ ತೆಗೆದುಕೊಂಡ ನಂತರ, ರಾಮ್‌ದೇವ್ ಪರ ವಕೀಲರು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ 24 ಗಂಟೆಗಳ ಒಳಗೆ ಇತ್ತೀಚಿನ ವಿಡಿಯೋದ ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಒಂದು ವಾರದೊಳಗೆ ಆದೇಶ ಅನುಸರಣೆಯ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ರಾಮ್‌ದೇವ್ ಪರ ವಕೀಲರಿಗೆ ಸೂಚಿಸಿದೆ. ಹಿಂದಿನ ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಶುಕ್ರವಾರ ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲಿದೆ.

ಏಪ್ರಿಲ್ 3ರಂದು ತಮ್ಮ ಕಂಪನಿಯ ಉತ್ಪನ್ನವಾದ ‘ಗುಲಾಬ್ ಶರ್ಬತ್’ ಅನ್ನು ಪ್ರಚಾರ ಮಾಡುವಾಗ ರಾಮ್‌ದೇವ್ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

ವಿಡಿಯೋವೊಂದರಲ್ಲಿ, ಅವರು ಹಮ್ದರ್ದ್‌ನ ರೂಹ್ ಅಫ್ಝಾವನ್ನು ಗುರಿಯಾಗಿಸಿಕೊಂಡು, ಹಮ್ದರ್ದ್ ತನ್ನ ಹಣವನ್ನು ಮಸೀದಿ ಮತ್ತು ಮದರಸಾಗಳ ನಿರ್ಮಾಣಕ್ಕೆ ಬಳಸುತ್ತಿದೆ ಎಂದು ದೂರಿದ್ದರು ಮತ್ತು ‘ಶರ್ಬತ್ ಜಿಹಾದ್’ ಎಂಬ ಪದವನ್ನು ಬಳಸಿ ಆರೋಪ ಮಾಡಿದ್ದರು.

ರಾಮ್‌ದೇವ್ ಅವರ ಕೋಮುದ್ವೇಷದ ವಿಡಿಯೋ ವಿರುದ್ಧ ಹಮ್ದರ್ದ್ ಕಂಪನಿ ನ್ಯಾಯಾಲಯ ಮೆಟ್ಟಿಲೇರಿತ್ತು.

ಹಮ್ದರ್ದ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ರಾಮದೇವ್ ಕೋಮುದ್ವೇಷದ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೊದಲ ವಿಡಿಯೋ ಮತ್ತು ಈಗ ಬಿಟ್ಟಿರುವ ವಿಡಿಯೋ ಎರಡರಲ್ಲೂ ರಾಮ್‌ದೇವ್ ಅವರು ಹಮ್ದರ್ದ್ ಕಂಪನಿಯನ್ನು ಉಲ್ಲೇಖಿಸಿದ್ದಾರೆ. ಎರಡರಲ್ಲೂ ಹಮ್ದರ್ದ್‌ ಹಣವನ್ನು ಮಸೀದಿ, ಮದ್ರಸಕ್ಕೆ ನಿರ್ಮಾಣಕ್ಕೆ ಬಳಸುತ್ತದೆ ಎಂದಿದ್ದಾರೆ. ಎರಡೂ ವಿಡಿಯೋಗಳಲ್ಲಿ ಹಮ್ದರ್ದ್‌ ನಿರ್ದಿಷ್ಟ ಸಮುದಾಯಕ್ಕೆ ಸೇರಿದ್ದು ಮತ್ತು ಅದು ಆ ಸಮುದಾಯದ ಹಿತಾಸಕ್ತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ ಎಂದು ವಕೀಲ ಸೇಥಿ ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ರಾಮದೇವ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ನಾಯರ್, ಇತ್ತೀಚಿನ ವಿಡಿಯೋದಲ್ಲಿ ಹಮ್ದರ್ದ್ ಉತ್ಪನ್ನವನ್ನು ಅವಹೇಳನ ಮಾಡಿಲ್ಲ ಮತ್ತು ಹಿಂದಿನ ವಿಡಿಯೋವನ್ನು ತೆಗೆದುಹಾಕುವ ಆದೇಶವನ್ನು ಈಗಾಗಲೇ ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಮದೇವ್ ಸಲ್ಲಿಸಿದ ಅಫಿಡವಿಟ್‌ನ ವಿಷಯಗಳ ಕಡೆಗೆ ನ್ಯಾಯಾಲಯದ ಗಮನ ಸೆಳೆಯಲು ನಾಯರ್ ಪ್ರಯತ್ನಿಸಿದ್ದಾರೆ.

“ಅಫಿಡವಿಟ್‌ನಲ್ಲಿ ಪ್ಯಾರಾ 3 ಮುಖ್ಯವಾಗಿದೆ, ಅಲ್ಲಿ ಅವರು “ನಾನು ಧರ್ಮಗಳ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ” ಎಂಬುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಅಮಿತ್ ಬನ್ಸಾಲ್, “ನಮಗೆ ಅವರ ರಾಜಕೀಯ ದೃಷ್ಟಿಕೋನದ ಬಗ್ಗೆ ತಿಳಿಯಬೇಕಾಗಿಲ್ಲ. ನನಗೆ ಈ ಮೊಕದ್ದಮೆಯ ಬಗ್ಗೆ ಮಾತ್ರ ತಿಳಿಯಬೇಕಿದೆ. ಅವರು ಅವರ (ಹಮ್ದರ್ದ್‌) ಹೆಸರು ಉತ್ಪನ್ನಗಳ ಬಗ್ಗೆ ಉಲ್ಲೇಖಿಸದಂತೆ ತಡೆಯುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ರಾಮದೇವ್ ಅವರ ಇತ್ತೀಚಿನ ವಿಡಿಯೋವನ್ನೂ ತೆಗೆದುಹಾಕಲಾಗುವುದು ಎಂದು ಅವರ ಪರ ವಕೀಲರು ತಿಳಿಸಿದ ಕಾರಣ ನ್ಯಾಯಾಲಯ ನ್ಯಾಯಾಂಗ ನಿಂದನೆ ನೋಟಿಸ್ ನೀಡಿಲ್ಲ ಎಂದು ವರದಿಯಾಗಿದೆ.

‘ಕೇಂದ್ರ ಹೆಡ್‌ಲೈನ್ ಕೊಟ್ಟಿದೆ, ಡೆಡ್‌ಲೈನ್ ಯಾವಾಗ?’ ಜಾತಿ ಗಣತಿ ಕುರಿತು ಕಾಂಗ್ರೆಸ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...