HomeUncategorized'RAW' ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

- Advertisement -
- Advertisement -

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಉತ್ತರ ಅಮೆರಿಕಾದಲ್ಲಿ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿರುವ ಕುರಿತು ‘ದಿ ಪ್ರಿಂಟ್’ ಪ್ರಕಟಿಸಿದ್ದ ಲೇಖನವನ್ನು ತೆಗೆದು ಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಲೇಖನವು ಅಧಿಕಾರಿಗಳ ವೃತ್ತಿ ಜೀವನ ಅಥವಾ ಅವರ ಕುಟುಂಬ ಸದಸ್ಯರ ಜೀವಕ್ಕೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠ ತಿಳಿಸಿದೆ.

ಪತ್ರಿಕಾ ಸ್ವಾತಂತ್ರ್ಯವನ್ನು ಅತ್ಯಂತ ಉನ್ನತ ಮಟ್ಟದಲ್ಲಿ ಇರಿಸಲಾಗಿದೆ. ಲೇಖನ ತೆಗೆದು ಹಾಕುವಂತೆ ನಾವು ಆದೇಶಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಸರ್ಕಾರವು ಅಗತ್ಯವೆಂದು ಪರಿಗಣಿಸಿದರೆ ಸಮಸ್ಯೆಯನ್ನು ನಿಭಾಯಿಸಲು ಅಧಿಕಾರ ಹೊಂದಿದೆ ಎಂದು ನ್ಯಾಯಾಲಯವು ಪಿಐಎಲ್‌ ತಿರಸ್ಕರಿಸುವಾಗ ತಿಳಿಸಿದೆ.

‘ದಿ ಪ್ರಿಂಟ್’ ನವೆಂಬರ್ 30, 2023 ರಂದು “Nijjar-Pannun effect: RAW downs shutters in North America 1st time since inception in 1968”ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಪ್ರಕಟಿಸಿತ್ತು. ಇದನ್ನು ದಿ ಪ್ರಿಂಟ್‌ಗೆ ಕಾಂಟ್ರಿಬ್ಯೂಟಿಂಗ್ ಎಡಿಟರ್ ಪ್ರವೀಣ್ ಸ್ವಾಮಿ ಅವರು ಬರೆದಿದ್ದರು.

ಭಾರತೀಯ ಹೈಕಮಿಷನ್‌ನಲ್ಲಿ ಕೆಲಸ ಮಾಡುವವರಿಂದ ತನಗೆ ಬಂದ ಮಾಹಿತಿಯ ಪ್ರಕಾರ, ಲೇಖನವು ಭಾರತೀಯ ರಾಜತಾಂತ್ರಿಕರು ಮತ್ತು ಗುಪ್ತಚರ ಕಾರ್ಯಕರ್ತರ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ ಎಂದು ವಕೀಲ ರಾಘವ್ ಅವಸ್ತಿ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ವಿದೇಶದಲ್ಲಿ ಕೆಲಸ ಮಾಡುವ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ರಾಜತಾಂತ್ರಿಕರು ಗುಪ್ತಚರ ಸೇವೆಗಳಿಗಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಮೂಲ ಆಧಾರಿತ ಊಹಾಪೋಹಗಳನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳಿಗೆ ನಿರ್ಬಂಧ ಹೇರಲು ಪಿಐಎಲ್‌ನಲ್ಲಿ ಕೋರಲಾಗಿತ್ತು.

‘ದಿ ಪ್ರಿಂಟ್‌’ನ ಲೇಖನವು ಸಂಪೂರ್ಣವಾಗಿ ಮೂಲ ಆಧಾರಿತವಾಗಿದೆ. ಇದು ಭಾರತೀಯ ರಾಜತಾಂತ್ರಿಕರ ವೃತ್ತಿ ಜೀವನಕ್ಕೆ ಹಾನಿಯನ್ನುಂಟು ಮಾಡಲಿದೆ ಮತ್ತು ಅವರ ಜೀವನವನ್ನು ಅಪಾಯಕ್ಕೆ ತಳ್ಳಲಿದೆ. ತನ್ನನ್ನು ಸಂಪರ್ಕಿಸಿದ ರಾಜತಾಂತ್ರಿಕರ ಗುರುತನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧ. ಅಧಿಕಾರಿಗಳ ಗುರುತನ್ನು ಮರೆ ಮಾಚಲು ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸಬಹುದು ಎಂದು ಅವಸ್ತಿ ಪಿಐಎಲ್‌ನಲ್ಲಿ ಹೇಳಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ರೀತಿಯ ಸುದ್ದಿಗಳ ವರದಿಯನ್ನು ನಿರ್ಬಂಧಿಸಿ ಆದೇಶಿಸಲು ಸಾಧ್ಯವಿಲ್ಲ ಎಂದು ವಾದವನ್ನು ತಿರಸ್ಕರಿಸಿದೆ. ಭಾರತ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಅಧಿಕಾರವನ್ನು ಹೊಂದಿದೆ. ರಾಷ್ಟ್ರೀಯ ಭದ್ರತೆಗೆ ಏನಾದರೂ ಅಪಾಯವಿದೆ ಎಂದು ಸರ್ಕಾರ ಭಾವಿಸಿದರೆ, ಅವರು ಅದರ ಮೇಲೆ ಕಾರ್ಯನಿರ್ವಹಿಸಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್‌ ಊಹೆಗಳ ಮೇಲೆ ಸಲ್ಲಿಸಲಾಗಿದೆ ಎಂದು ಅದನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...