HomeUncategorized'RAW' ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

- Advertisement -
- Advertisement -

ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಉತ್ತರ ಅಮೆರಿಕಾದಲ್ಲಿ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿರುವ ಕುರಿತು ‘ದಿ ಪ್ರಿಂಟ್’ ಪ್ರಕಟಿಸಿದ್ದ ಲೇಖನವನ್ನು ತೆಗೆದು ಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಮೇಲ್ನೋಟಕ್ಕೆ ಲೇಖನವು ಅಧಿಕಾರಿಗಳ ವೃತ್ತಿ ಜೀವನ ಅಥವಾ ಅವರ ಕುಟುಂಬ ಸದಸ್ಯರ ಜೀವಕ್ಕೆ ಯಾವುದೇ ಅಪಾಯವನ್ನುಂಟು ಮಾಡುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠ ತಿಳಿಸಿದೆ.

ಪತ್ರಿಕಾ ಸ್ವಾತಂತ್ರ್ಯವನ್ನು ಅತ್ಯಂತ ಉನ್ನತ ಮಟ್ಟದಲ್ಲಿ ಇರಿಸಲಾಗಿದೆ. ಲೇಖನ ತೆಗೆದು ಹಾಕುವಂತೆ ನಾವು ಆದೇಶಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಸರ್ಕಾರವು ಅಗತ್ಯವೆಂದು ಪರಿಗಣಿಸಿದರೆ ಸಮಸ್ಯೆಯನ್ನು ನಿಭಾಯಿಸಲು ಅಧಿಕಾರ ಹೊಂದಿದೆ ಎಂದು ನ್ಯಾಯಾಲಯವು ಪಿಐಎಲ್‌ ತಿರಸ್ಕರಿಸುವಾಗ ತಿಳಿಸಿದೆ.

‘ದಿ ಪ್ರಿಂಟ್’ ನವೆಂಬರ್ 30, 2023 ರಂದು “Nijjar-Pannun effect: RAW downs shutters in North America 1st time since inception in 1968”ಎಂಬ ಶೀರ್ಷಿಕೆಯಲ್ಲಿ ಲೇಖನವನ್ನು ಪ್ರಕಟಿಸಿತ್ತು. ಇದನ್ನು ದಿ ಪ್ರಿಂಟ್‌ಗೆ ಕಾಂಟ್ರಿಬ್ಯೂಟಿಂಗ್ ಎಡಿಟರ್ ಪ್ರವೀಣ್ ಸ್ವಾಮಿ ಅವರು ಬರೆದಿದ್ದರು.

ಭಾರತೀಯ ಹೈಕಮಿಷನ್‌ನಲ್ಲಿ ಕೆಲಸ ಮಾಡುವವರಿಂದ ತನಗೆ ಬಂದ ಮಾಹಿತಿಯ ಪ್ರಕಾರ, ಲೇಖನವು ಭಾರತೀಯ ರಾಜತಾಂತ್ರಿಕರು ಮತ್ತು ಗುಪ್ತಚರ ಕಾರ್ಯಕರ್ತರ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ ಎಂದು ವಕೀಲ ರಾಘವ್ ಅವಸ್ತಿ ಎಂಬವರು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ವಿದೇಶದಲ್ಲಿ ಕೆಲಸ ಮಾಡುವ ಯಾವುದೇ ಸರ್ಕಾರಿ ಅಧಿಕಾರಿ ಅಥವಾ ರಾಜತಾಂತ್ರಿಕರು ಗುಪ್ತಚರ ಸೇವೆಗಳಿಗಾಗಿ ಕೆಲಸ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಮೂಲ ಆಧಾರಿತ ಊಹಾಪೋಹಗಳನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳಿಗೆ ನಿರ್ಬಂಧ ಹೇರಲು ಪಿಐಎಲ್‌ನಲ್ಲಿ ಕೋರಲಾಗಿತ್ತು.

‘ದಿ ಪ್ರಿಂಟ್‌’ನ ಲೇಖನವು ಸಂಪೂರ್ಣವಾಗಿ ಮೂಲ ಆಧಾರಿತವಾಗಿದೆ. ಇದು ಭಾರತೀಯ ರಾಜತಾಂತ್ರಿಕರ ವೃತ್ತಿ ಜೀವನಕ್ಕೆ ಹಾನಿಯನ್ನುಂಟು ಮಾಡಲಿದೆ ಮತ್ತು ಅವರ ಜೀವನವನ್ನು ಅಪಾಯಕ್ಕೆ ತಳ್ಳಲಿದೆ. ತನ್ನನ್ನು ಸಂಪರ್ಕಿಸಿದ ರಾಜತಾಂತ್ರಿಕರ ಗುರುತನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧ. ಅಧಿಕಾರಿಗಳ ಗುರುತನ್ನು ಮರೆ ಮಾಚಲು ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪ ನಡೆಸಬಹುದು ಎಂದು ಅವಸ್ತಿ ಪಿಐಎಲ್‌ನಲ್ಲಿ ಹೇಳಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ರೀತಿಯ ಸುದ್ದಿಗಳ ವರದಿಯನ್ನು ನಿರ್ಬಂಧಿಸಿ ಆದೇಶಿಸಲು ಸಾಧ್ಯವಿಲ್ಲ ಎಂದು ವಾದವನ್ನು ತಿರಸ್ಕರಿಸಿದೆ. ಭಾರತ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಅಧಿಕಾರವನ್ನು ಹೊಂದಿದೆ. ರಾಷ್ಟ್ರೀಯ ಭದ್ರತೆಗೆ ಏನಾದರೂ ಅಪಾಯವಿದೆ ಎಂದು ಸರ್ಕಾರ ಭಾವಿಸಿದರೆ, ಅವರು ಅದರ ಮೇಲೆ ಕಾರ್ಯನಿರ್ವಹಿಸಲು ಸ್ವತಂತ್ರರು ಎಂದು ನ್ಯಾಯಾಲಯ ಹೇಳಿದೆ. ಪಿಐಎಲ್‌ ಊಹೆಗಳ ಮೇಲೆ ಸಲ್ಲಿಸಲಾಗಿದೆ ಎಂದು ಅದನ್ನು ತಿರಸ್ಕರಿಸಿದೆ.

ಇದನ್ನೂ ಓದಿ : ಸಿಬಿಐನಿಂದ ಕೊಚ್ಚರ್ ದಂಪತಿಯ ಬಂಧನ: ‘ಅಧಿಕಾರದ ದುರುಪಯೋಗ’ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...