Homeಮುಖಪುಟಬಿಜೆಪಿ ಸಂಸದರ ಮೇಲೆ ಮಾನಹಾನಿ ಪ್ರಕರಣ: ಸಮನ್ಸ್‌ ರದ್ದತಿ ಕೋರಿದ್ದ ಮನವಿ ತಿರಸ್ಕಾರ

ಬಿಜೆಪಿ ಸಂಸದರ ಮೇಲೆ ಮಾನಹಾನಿ ಪ್ರಕರಣ: ಸಮನ್ಸ್‌ ರದ್ದತಿ ಕೋರಿದ್ದ ಮನವಿ ತಿರಸ್ಕಾರ

ಮನೋಜ್ ತಿವಾರಿ ತಮ್ಮ ವಿರುದ್ಧ ಆಧಾರರಹಿತ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ಮೇಲೆ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿಯ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮಾನಹಾನಿ ಪ್ರಕರಣ ದಾಖಲಿಸಿದ್ದರು.

- Advertisement -
- Advertisement -

ಬಿಜೆಪಿ ಸಂಸದ ಮನೋಜ್ ತಿವಾರಿ ವಿರುದ್ಧ ಕ್ರಿಮಿನಲ್ ಮಾನಹಾನಿಗೆ ಸಂಬಂಧಿಸಿದಂತೆ ಆಪ್ ಮುಖಂಡ ಮನಿಶ್ ಸಿಸೋಡಿಯಾ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿತ್ತು. ಇದನ್ನು ರದ್ದುಗೊಳಿಸುವಂತೆ ಮನೋಜ್ ತಿವಾರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ಇಂದು ತಿರಸ್ಕರಿಸಿದೆ.

ಮನೋಜ್ ತಿವಾರಿ ತಮ್ಮ ವಿರುದ್ಧ ಆಧಾರರಹಿತ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ ಎಂದು ಅವರ ಮೇಲೆ ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿಯ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ದೆಹಲಿ ಸರ್ಕಾರದ ‘ಶಾಲಾ ತರಗತಿ ಕೊಠಡಿಗಳ’ ಯೋಜನೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಕ್ಕಾಗಿ ಸಂಸದರಾದ ಮನೋಜ್ ತಿವಾರಿ, ಹನ್ಸ್ ರಾಜ್ ಹನ್ಸ್ ಮತ್ತು ಪ್ರವೀಶ್ ವರ್ಮಾ, ಶಾಸಕರಾದ ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ವಿಜೇಂದರ್ ಗುಪ್ತಾ ಮತ್ತು ಬಿಜೆಪಿ ವಕ್ತಾರ ಹರೀಶ್ ಖುರಾನಾ ವಿರುದ್ಧ ಮನಿಶ್ ಸಿಸೋಡಿಯಾ ದೂರು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾದ ನಂತರ ಆರೋಪಿಗಳಿಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ರೈತರು ಮಾತು ಕೇಳಲು ಇನ್ನೆಷ್ಟು ರೈತರ ಬಲಿಬೇಕು?: ಕೃಷಿ ಮಸೂದೆ ಹರಿದು ಆಕ್ರೋಶ ಹೊರಹಾಕಿದ…

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಐಪಿಸಿಯ ಸೆಕ್ಷನ್ 499 ಮತ್ತು 500 ರ ಸೆಕ್ಷನ್ 49 ಮತ್ತು 35 ಮತ್ತು ಸಿಆರ್‌ಪಿಸಿಯ ಸೆಕ್ಷನ್ 200 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಈ ಪ್ರಕರಣದಲ್ಲಿ ಅಪರಾಧ ಸಾಬೀತಾದರೆ ಗರಿಷ್ಟ 2 ವರ್ಷಗಳವರೆಗೆ ಶಿಕ್ಷೆಗೆ ಗುರಿಯಾಗಬಹುದು. ಹಾಗಾಗಿ ತಮ್ಮ ವಿರುದ್ಧ ನೀಡಲಾಗಿರುವ ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಮನೋಜ್ ತಿವಾರಿ ಮನವಿ ಸಲ್ಲಿಸಿದ್ದರು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...