Homeಮುಖಪುಟಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂಬ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿದಾರರಿಗೆ ಒದಗಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದ ಸಿಐಸಿಯ 2017ರ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ (ಡಿಯು) ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠ ಪುರಸ್ಕರಿಸಿದೆ.

“ಸಿಐಸಿ ಆದೇಶವನ್ನು ರದ್ದುಗೊಳಿಸಲಾಗಿದೆ” ಎಂಬುವುದಾಗಿ ಏಕ ಸದಸ್ಯ ನ್ಯಾಯಾಧೀಶರ ಪೀಠ ತೀರ್ಪು ಪ್ರಕಟಿಸುತ್ತಾ ಹೇಳಿದೆ” ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿ ರಾಜ್ಯಶಾಸ್ತ್ರದಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆಂದು ಹೇಳಲಾಗುವ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಕೋರ್ಸ್ ತೇರ್ಗಡೆಯಾದ ವಿದ್ಯಾರ್ಥಿಗಳ ದಾಖಲೆಗಳನ್ನು ಆರ್‌ಟಿಐ ಅರ್ಜಿದಾರರು ಕೋರಿದ್ದರು.

2016ರಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರಿಗೆ ತಮ್ಮ ಶೈಕ್ಷಣಿಕ ಪದವಿಗಳ ಬಗ್ಗೆ ಸ್ಪಷ್ಟನೆ ನೀಡಿ ಮತ್ತು ಅವುಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಕೇಳಿದ್ದ ನಂತರ ಈ ವಿಷಯವು ಚರ್ಚೆಗೆ ಬಂದಿತ್ತು.

ಪ್ರಧಾನಿ ಮೋದಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ರಾಜ್ಯಶಾಸ್ತ್ರ ಕೋರ್ಸ್‌ನಲ್ಲಿ ಪದವಿ ಪಡೆದಿರುವುದಾಗಿ ತಿಳಿಸಿದ್ದರು.

ಅದಕ್ಕೂ ಒಂದು ವರ್ಷದ ಮೊದಲು, ನೀರಜ್ ಶರ್ಮಾ ಎಂಬುವವರು 1978ರಲ್ಲಿ ದೆಹಲಿ ವಿಶ್ವವಿದ್ಯಾಲಯವು ನೀಡಿದ ಎಲ್ಲಾ ಬಿಎ ಪದವಿಗಳ ವಿವರಗಳನ್ನು ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಲು ವಿಶ್ವವಿದ್ಯಾನಿಲಯವು ನಿರಾಕರಿಸಿತ್ತು. ಅದು ‘ಖಾಸಗಿ’ ಮತ್ತು ‘ಸಾರ್ವಜನಿಕ ಹಿತಾಸಕ್ತಿಗೆ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿತ್ತು.

ಡಿಸೆಂಬರ್ 2016 ರಲ್ಲಿ, ಶರ್ಮಾ ವಿಶ್ವವಿದ್ಯಾಲಯದ ಪ್ರತಿಕ್ರಿಯೆಯ ವಿರುದ್ಧ ಸಿಐಸಿಗೆ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಆಯುಕ್ತ ಪ್ರೊ. ಎಂ. ಆಚಾರ್ಯುಲು ಅವರು 1978ರಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಹೊಂದಿರುವ ರಿಜಿಸ್ಟರ್ ಅನ್ನು ಸಾರ್ವಜನಿಕಗೊಳಿಸುವಂತೆ ದೆಹಲಿ ವಿವಿಗೆ ನಿರ್ದೇಶನ ನೀಡಿದ್ದರು.

ಜನವರಿ 23,2017 ರಂದು ದೆಹಲಿ ವಿವಿ ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಸಂಬಂಧ ವಿವಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು “ಸಿಐಸಿ ಆದೇಶವು ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ದೇಶದ ವಿವಿಗಳ ಕೋಟ್ಯಂತರ ವಿದ್ಯಾರ್ಥಿಗಳ ಪದವಿ ವಿವರಗಳು ವಿಶ್ವಾಸಾರ್ಹ ವಿಷಯವಾಗಿದೆ” ಎಂದಿದ್ದರು.

‘ತಿಳಿದುಕೊಳ್ಳುವ ಹಕ್ಕು ಅನಿಯಂತ್ರಿತ ಹಕ್ಕಲ್ಲ. ಆರ್‌ಟಿಐ ಕಾಯ್ದೆಯಡಿಯಲ್ಲಿ ವೈಯಕ್ತಿಕ ಮಾಹಿತಿ ಕೇಳಲು ಅವಕಾಶವಿಲ್ಲ. ಅಧಿಕಾರಿಗಳನ್ನು ಬೆದರಿಸಲು ಆರ್‌ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest) ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದರು.

ಆರ್‌ಟಿಐ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿದ್ಯಾರ್ಥಿಗಳ ಪದವಿ ವಿವರಗಳನ್ನು ವಿಶ್ವಾಸಾರ್ಹ ವಿಷಯ ಎಂಬ ದೆಹಲಿ ವಿವಿಯ ವಾದವನ್ನು ಪ್ರಶ್ನಿಸಿದ್ದರು.

ಮಾಹಿತಿ ಬಹಿರಂಗಪಡಿಸುವಿಕೆಯು ಸಾರ್ವಜನಿಕವಾಗಿ ಒಳಿತನ್ನು ಉಂಟುಮಾಡುತ್ತದೆಯೇ ಅಥವಾ ಹಾನಿಯನ್ನುಂಟುಮಾಡುತ್ತದೆಯೇ ಎಂದು ಮಾಹಿತಿ ಅಧಿಕಾರಿ ನೋಡಬೇಕು ಎಂದು ಎಂದಿದ್ದರು.

ವಾದ ಆಲಿಸಿದ್ದ ನ್ಯಾಯಾಲಯ ಜನವರಿ 2017ರಲ್ಲಿ ಅರ್ಜಿದಾರ ಶರ್ಮಾ ಅವರಿಗೆ ನೋಟಿಸ್ ನೀಡಿ ಆದೇಶ ಕಾಯ್ದಿರಿಸಿತ್ತು.

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...