Homeಮುಖಪುಟಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಪ್ರಧಾನಿ ಮೋದಿ ಪದವಿ ವಿವರ ಬಹಿರಂಗಪಡಿಸುವ ಆದೇಶ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂಬ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿದಾರರಿಗೆ ಒದಗಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದ ಸಿಐಸಿಯ 2017ರ ಆದೇಶವನ್ನು ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ (ಡಿಯು) ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಸಚಿನ್ ದತ್ತ ಅವರ ಪೀಠ ಪುರಸ್ಕರಿಸಿದೆ.

“ಸಿಐಸಿ ಆದೇಶವನ್ನು ರದ್ದುಗೊಳಿಸಲಾಗಿದೆ” ಎಂಬುವುದಾಗಿ ಏಕ ಸದಸ್ಯ ನ್ಯಾಯಾಧೀಶರ ಪೀಠ ತೀರ್ಪು ಪ್ರಕಟಿಸುತ್ತಾ ಹೇಳಿದೆ” ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಧಾನಿ ಮೋದಿ ರಾಜ್ಯಶಾಸ್ತ್ರದಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆಂದು ಹೇಳಲಾಗುವ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಕೋರ್ಸ್ ತೇರ್ಗಡೆಯಾದ ವಿದ್ಯಾರ್ಥಿಗಳ ದಾಖಲೆಗಳನ್ನು ಆರ್‌ಟಿಐ ಅರ್ಜಿದಾರರು ಕೋರಿದ್ದರು.

2016ರಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರಿಗೆ ತಮ್ಮ ಶೈಕ್ಷಣಿಕ ಪದವಿಗಳ ಬಗ್ಗೆ ಸ್ಪಷ್ಟನೆ ನೀಡಿ ಮತ್ತು ಅವುಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಕೇಳಿದ್ದ ನಂತರ ಈ ವಿಷಯವು ಚರ್ಚೆಗೆ ಬಂದಿತ್ತು.

ಪ್ರಧಾನಿ ಮೋದಿ ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬಿಎ ರಾಜ್ಯಶಾಸ್ತ್ರ ಕೋರ್ಸ್‌ನಲ್ಲಿ ಪದವಿ ಪಡೆದಿರುವುದಾಗಿ ತಿಳಿಸಿದ್ದರು.

ಅದಕ್ಕೂ ಒಂದು ವರ್ಷದ ಮೊದಲು, ನೀರಜ್ ಶರ್ಮಾ ಎಂಬುವವರು 1978ರಲ್ಲಿ ದೆಹಲಿ ವಿಶ್ವವಿದ್ಯಾಲಯವು ನೀಡಿದ ಎಲ್ಲಾ ಬಿಎ ಪದವಿಗಳ ವಿವರಗಳನ್ನು ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಲು ವಿಶ್ವವಿದ್ಯಾನಿಲಯವು ನಿರಾಕರಿಸಿತ್ತು. ಅದು ‘ಖಾಸಗಿ’ ಮತ್ತು ‘ಸಾರ್ವಜನಿಕ ಹಿತಾಸಕ್ತಿಗೆ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿತ್ತು.

ಡಿಸೆಂಬರ್ 2016 ರಲ್ಲಿ, ಶರ್ಮಾ ವಿಶ್ವವಿದ್ಯಾಲಯದ ಪ್ರತಿಕ್ರಿಯೆಯ ವಿರುದ್ಧ ಸಿಐಸಿಗೆ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಆಯುಕ್ತ ಪ್ರೊ. ಎಂ. ಆಚಾರ್ಯುಲು ಅವರು 1978ರಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ವಿಷಯದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪಟ್ಟಿಯನ್ನು ಹೊಂದಿರುವ ರಿಜಿಸ್ಟರ್ ಅನ್ನು ಸಾರ್ವಜನಿಕಗೊಳಿಸುವಂತೆ ದೆಹಲಿ ವಿವಿಗೆ ನಿರ್ದೇಶನ ನೀಡಿದ್ದರು.

ಜನವರಿ 23,2017 ರಂದು ದೆಹಲಿ ವಿವಿ ಸಿಐಸಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಸಂಬಂಧ ವಿವಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು “ಸಿಐಸಿ ಆದೇಶವು ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ದೇಶದ ವಿವಿಗಳ ಕೋಟ್ಯಂತರ ವಿದ್ಯಾರ್ಥಿಗಳ ಪದವಿ ವಿವರಗಳು ವಿಶ್ವಾಸಾರ್ಹ ವಿಷಯವಾಗಿದೆ” ಎಂದಿದ್ದರು.

‘ತಿಳಿದುಕೊಳ್ಳುವ ಹಕ್ಕು ಅನಿಯಂತ್ರಿತ ಹಕ್ಕಲ್ಲ. ಆರ್‌ಟಿಐ ಕಾಯ್ದೆಯಡಿಯಲ್ಲಿ ವೈಯಕ್ತಿಕ ಮಾಹಿತಿ ಕೇಳಲು ಅವಕಾಶವಿಲ್ಲ. ಅಧಿಕಾರಿಗಳನ್ನು ಬೆದರಿಸಲು ಆರ್‌ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಾದಿಸಿದ್ದರು.

‘ಸಾರ್ವಜನಿಕ ಕುತೂಹಲ (Interest to the Public) ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ( Public Interest) ಎನ್ನುವುದು ಎರಡೂ ಒಂದೇ ಅಲ್ಲ. ಹಾಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಕುತೂಹಲಕ್ಕಾಗಿ ಮೋದಿಯವರ ಪದವಿ ವಿವರ ಕೇಳಲು ಸಾಧ್ಯವಿಲ್ಲ ಎಂದಿದ್ದರು.

ಆರ್‌ಟಿಐ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸಂಜಯ್ ಹೆಗ್ಡೆ, ವಿದ್ಯಾರ್ಥಿಗಳ ಪದವಿ ವಿವರಗಳನ್ನು ವಿಶ್ವಾಸಾರ್ಹ ವಿಷಯ ಎಂಬ ದೆಹಲಿ ವಿವಿಯ ವಾದವನ್ನು ಪ್ರಶ್ನಿಸಿದ್ದರು.

ಮಾಹಿತಿ ಬಹಿರಂಗಪಡಿಸುವಿಕೆಯು ಸಾರ್ವಜನಿಕವಾಗಿ ಒಳಿತನ್ನು ಉಂಟುಮಾಡುತ್ತದೆಯೇ ಅಥವಾ ಹಾನಿಯನ್ನುಂಟುಮಾಡುತ್ತದೆಯೇ ಎಂದು ಮಾಹಿತಿ ಅಧಿಕಾರಿ ನೋಡಬೇಕು ಎಂದು ಎಂದಿದ್ದರು.

ವಾದ ಆಲಿಸಿದ್ದ ನ್ಯಾಯಾಲಯ ಜನವರಿ 2017ರಲ್ಲಿ ಅರ್ಜಿದಾರ ಶರ್ಮಾ ಅವರಿಗೆ ನೋಟಿಸ್ ನೀಡಿ ಆದೇಶ ಕಾಯ್ದಿರಿಸಿತ್ತು.

ಬುಲ್ಡೋಝರ್ ಅ’ನ್ಯಾಯ’ದ ವಿರುದ್ದದ ತೀರ್ಪು ನಾಗರಿಕರ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಸಿಜೆಐ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...