Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...