Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...